
ಗೋರಕ್ ಪುರ್ (ಫೆ.18): ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅಖಿಲೇಶ್ ಯಾದವ್ ವಿರುದ್ಧ ಕಿಡಿ ಕಾರಿದ್ದಾರೆ. ಲಕ್ನೋ ಮೆಟ್ರೋ ಪ್ರಾಜೆಕ್ಟ್ ನಲ್ಲಿ ಭ್ರಷ್ಟಾಚಾರ ನಡೆದಿದ್ದು ಅದರಲ್ಲಿ ಅಖಿಲೇಶ್ ಕೂಡಾ ಭಾಗಿಯಾಗಿದ್ದಾರೆ ಎಂದು ಶಾ ಆರೋಪಿಸಿದ್ದಾರೆ.
ಗೋರಕ್ ಪುರದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ, ಕಾಂಗ್ರೆಸ್ಸನ್ನು ಮೊದಲಿನಿಂದಲೂ ವಿರೋಧಿಸುತ್ತಿರುವ ಸಮಾಜವಾದಿ ಪಕ್ಷ ಈಗ ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಂಡಿದೆ. ಎರಡು ಭ್ರಷ್ಟಾಚಾರ ಪಕ್ಷಗಳ ನಡುವಿನ ಅಪವಿತ್ರ ಮೈತ್ರಿ ಇದಾಗಿದೆ ಎಂದು ಅಮಿತ್ ಶಾ ಹೇಳಿದ್ದಾರೆ.
ಪ್ರತಿಯೊಬ್ಬರಿಗೂ ತಮ್ಮ ಕುಟುಂಬದ ಜೊತೆ ಮೆಟ್ರೋದಲ್ಲಿ ಸಂಚರಿಸಬೇಕೆಂಬ ಆಸೆಯಿರುತ್ತದೆ. ಆದರೆ ಅಂತವರು ಬರಿಗೈಲಿ ವಾಪಸ್ಸಾಗಬೇಕಾಗುತ್ತದೆ. ಯಾಕೆಂದರೆ ಮೆಟ್ರೋ ಇನ್ನೂ ಪ್ರಾರಂಭವಾಗಿಲ್ಲವೆಂದು ಶಾ ವ್ಯಂಗ್ಯವಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.