ಅಮೂಲ್ಯ-ಜಗದೀಶ್ ಅದ್ದೂರಿ ಬೀಗರಕೂಟ

Published : May 20, 2017, 11:43 PM ISTUpdated : Apr 11, 2018, 12:42 PM IST
ಅಮೂಲ್ಯ-ಜಗದೀಶ್ ಅದ್ದೂರಿ ಬೀಗರಕೂಟ

ಸಾರಾಂಶ

ನವಜೋಡಿ ಜಗದೀಶ್ ಮತ್ತು ಅಮೂಲ್ಯ ಮನೆಯಿಂದಲೇ ಬರಿಗಾಲಲ್ಲೇ ದೇವರನ್ನ ತರಲು ಬೀರೇಶ್ವರ ಸ್ವಾಮಿ ದೇವಸ್ಥಾನಕ್ಕೆ ಬಂದರು. ದೇವಸ್ಥಾನದಲ್ಲಿ ಗಂಗೆ ಪೂಜೆ ಬಳಿಕ ದೇವರ ಪೂಜೆ ನಡೀತು. ಬೀರೇಶ್ವರ ದೇವಸ್ಥಾನದಿಂದ ಶುರುವಾದ ಅರಿಸೇವೆ ಉತ್ಸವದಲ್ಲಿ ಅಮೂಲ್ಯ ಮತ್ತು ಜಗದೀಶ್ ಬಟ್ಟೆ ಮೇಲೆಯೇ ಮನೆ ತನಕ ನಡೆದು ಬಂದರು.

ಬೆಂಗಳೂರು(ಮೇ.20): ಚೆಲುವಿನ ಬೆಡಗಿ ಅಮೂಲ್ಯ ಮದುವೆ ಸಂಭ್ರಮ ಇನ್ನೂ ಮುಗಿದಿಲ್ಲ. ಇವತ್ತು ಜಗದೀಶ್ ಮನೆಯಲ್ಲಿ ಅರಿಸೇವೆ ನಡೆಯಿತು. ನವದಂಪತಿಗಾಗಿ ತಂದೆ ರಾಮಚಂದ್ರಪ್ಪ ತಿರುಪತಿ ವೆಂಕಟರಮಣ ಪೂಜೆ ಮಾಡಿಸಿದರು. ಇನ್ನು ನಾಳೆ ಅದ್ದೂರಿ ಬೀಗರಕೂಟ ನಡೆಯಲಿದ್ದು 20 ಸಾವಿರ ಮಂದಿಗೆ ಊಟದ ವ್ಯವಸ್ಥೆ ಮಾಡಲಾಗಿದೆ.

ನವಜೋಡಿ ಜಗದೀಶ್ ಮತ್ತು ಅಮೂಲ್ಯ ಮನೆಯಿಂದಲೇ ಬರಿಗಾಲಲ್ಲೇ ದೇವರನ್ನ ತರಲು ಬೀರೇಶ್ವರ ಸ್ವಾಮಿ ದೇವಸ್ಥಾನಕ್ಕೆ ಬಂದರು. ದೇವಸ್ಥಾನದಲ್ಲಿ ಗಂಗೆ ಪೂಜೆ ಬಳಿಕ ದೇವರ ಪೂಜೆ ನಡೀತು. ಬೀರೇಶ್ವರ ದೇವಸ್ಥಾನದಿಂದ ಶುರುವಾದ ಅರಿಸೇವೆ ಉತ್ಸವದಲ್ಲಿ ಅಮೂಲ್ಯ ಮತ್ತು ಜಗದೀಶ್ ಬಟ್ಟೆ ಮೇಲೆಯೇ ಮನೆ ತನಕ ನಡೆದು ಬಂದರು.

ನಾಳೆ ನಡೆಯುವ ಬೀಗರಕೂಟಕ್ಕೆ ಸುಮಾರು 15 ರಿಂದ 20 ಸಾವಿರ ಮಂದಿಗೆ ಭರ್ಜರಿ ಬಾಡೂಟದ ವ್ಯವಸ್ಥೆ ಮಾಡಲಾಗಿದೆ. ಆರ್.ಆರ್.ನಗರದ ಡಬಲ್ ರೋಡ್​ ಸಮೀಪ  ಬೃಹತ್ ಪೆಂಡಾಲ್ ಹಾಕಲಾಗಿದೆ. ವೆಜ್ ಮತ್ತು ನಾನ್​ವೆಜ್​​ ಊಟದ ವ್ಯವಸ್ಥೆ ಕೂಡ ಇದೆ. ಒಟ್ಟಿನಲ್ಲಿ ನಾಳಿನ ಬೀಗರಕೂಟದ ಜೊತೆ ಅಮೂಲ್ಯ-ಜಗದೀಶ್ ಅದ್ದೂರಿ ಕಲ್ಯಾಣಕ್ಕೆ ತೆರೆ ಬೀಳಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸದನದಲ್ಲಿ ಸಿದ್ದು vs ಬೆಲ್ಲದ್‌ ಒಳಮೀಸಲು ಹೆಚ್ಚಳ ಜಟಾಪಟಿ! ಯತ್ನಾಳ್‌ಗೆ ಸಿಎಂ ಸಂವಿಧಾನ ಪಾಠ
ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!