ಕಾಗೇರಿಗೆ ಅನಂತ್ ಕುಮಾರ್ ಹೆಗಡೆ ಚಪ್ಪಲಿ ಏಟು

Published : Jul 01, 2018, 11:31 AM IST
ಕಾಗೇರಿಗೆ ಅನಂತ್ ಕುಮಾರ್ ಹೆಗಡೆ ಚಪ್ಪಲಿ ಏಟು

ಸಾರಾಂಶ

ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಅನಂತಕುಮಾರ್‌ ಹೆಗಡೆ ಚಪ್ಪಲಿಯಿಂದ ಹೊಡೆದಿದ್ದಾರೆ. ಡಾಕ್ಟರ್‌ ಮೇಲೆ ಹಲ್ಲೆ ಮಾಡಿದ್ದಾರೆ. ಅವರಿಗೆ ಸಂಸ್ಕಾರ ಎನ್ನುವುದೇ ಇಲ್ಲ ಎಂದು ಜೆಡಿಎಸ್‌ ಮುಖಂಡ ಆನಂದ್‌ ಅಸ್ನೋಟಿಕರ್‌ ಹೇಳಿದ್ದಾರೆ.

ಕಾರವಾರ :  ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತಕುಮಾರ ಹೆಗಡೆ ಅವರನ್ನು ಮಾಜಿ ಸಚಿವ, ಜೆಡಿಎಸ್‌ ಮುಖಂಡ ಆನಂದ್‌ ಅಸ್ನೋಟಿಕರ್‌ ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ. 

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಅನಂತಕುಮಾರ್‌ ಚಪ್ಪಲಿಯಿಂದ ಹೊಡೆದಿದ್ದಾರೆ. ಡಾಕ್ಟರ್‌ ಮೇಲೆ ಹಲ್ಲೆ ಮಾಡಿದ್ದಾರೆ. ಅವರಿಗೆ ಸಂಸ್ಕಾರ ಎನ್ನುವುದೇ ಇಲ್ಲ. 

ಏನೇನೋ ಮಾತನಾಡುತ್ತಾರೆ ಎಂದರು. ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಯಾರು ಬಾವುಟ ಹಾರಿಸಿದ್ದೋ ಏನೋ? ಅದನ್ನೇ ಹಿಡಿದುಕೊಂಡು ತಾನು ಹಾಗೆ ಮಾಡಿದ್ದೇನೆ. ಹೀಗೆ ಮಾಡಿದ್ದೇನೆ ಎಂದು ಬಿಂಬಿಸಿದ್ದಾನೆ. 

ಅಮಿತ್‌ ಶಾ ಹೇಗೋ ಸಚಿವರನ್ನಾಗಿ ಮಾಡಿದರು. ಈಗ ಅವರಿಗೂ ಗೊತ್ತಾಗಿದೆ. ಅವರದೆ ಪಕ್ಷದ ಕೇಂದ್ರ ಸಚಿವ ಅನಂತಕುಮಾರ್‌ ಸಹ ಪರೋಕ್ಷವಾಗಿ ಇವರ ಬಗ್ಗೆ ಮಾತುಗಳನ್ನಾಡಿದ್ದಾರೆ ಎಂದು ತಿಳಿಸಿದರು. 

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್‌ನಿಂದ ಸ್ಪರ್ಧಿಸುವ ಇಂಗಿತವನ್ನು ಆನಂದ್‌ ಅಸ್ನೋಟಿಕರ್‌ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯಲ್ಲಿ ಪಕ್ಷ ಬಲಿಷ್ಠವಾಗಿದೆ. ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಮೈತ್ರಿ ಮಾಡಿಕೊಂಡು ಅಭ್ಯರ್ಥಿಯನ್ನು ಕಣಕ್ಕಿಳಿಸಿದಲ್ಲಿ ಗೆಲವು ನಿಶ್ಚಿತ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Davanagere South by election results 2026: ಇಂದು ಮತ ಎಣಿಕೆ ಹಿನ್ನೆಲೆ 'ಶುಷ್ಕ ದಿವಸ' ಘೋಷಣೆ, ಯಾವಕ್ಕೆಲ್ಲ ನಿರ್ಬಂಧ?
ದಕ್ಷಿಣಕ್ಕೆ ಸಮರ್ಥ ಆಯ್ಕೆಯೋ?, ಶ್ರೀನಿವಾಸ ಕಲ್ಯಾಣವೋ?! SDPI ಅಭ್ಯರ್ಥಿ ಅಫ್ಸರ್‌ ಸ್ಪರ್ಧೆಯಿಂದ 'ಕೊಡ್ಲಿ ಪೆಟ್ಟು' ಯಾರಿಗೆ?