ಅಡಿಕೆ ಮರ ಏರಲು ಬಂತು ಹೈಟೆಕ್ ಯಂತ್ರ, ಭಟ್ಟರ ಸಂಶೋಧನೆಗೆ ಮಹೀಂದ್ರಾ ಮೆಚ್ಚುಗೆ

Published : Jun 19, 2019, 10:16 PM ISTUpdated : Jun 19, 2019, 10:19 PM IST
ಅಡಿಕೆ ಮರ ಏರಲು ಬಂತು ಹೈಟೆಕ್ ಯಂತ್ರ, ಭಟ್ಟರ ಸಂಶೋಧನೆಗೆ ಮಹೀಂದ್ರಾ ಮೆಚ್ಚುಗೆ

ಸಾರಾಂಶ

ಬಂಟ್ವಾಳದ ಕೃಷಿಕ ಗಣಪತಿ ಭಟ್‌ ಅವರು ಆವಿಷ್ಕಾರ ಮಾಡಿರುವ ಅಡಿಕೆ ಮರ ಏರುವ ಸರಳ ಯಂತ್ರ  ಮುಂದಿನ ದಿನಗಳಲ್ಲಿ ರೈತರಿಗೆ ನೆರವಾಗುವುದರಲ್ಲಿ ಅನುಮಾನವೇ ಇಲ್ಲ. ಮಹೀಂದ್ರಾ ಕಂಪನಿಯ ಆನಂದ್ ಮಹೀಂದ್ರಾ ಸಹ ಮೆಚ್ಚುಗೆ ಸೂಚಿಸಿದ್ದಾರೆ.

ಮಂಗಳೂರು[ಜೂ 19]  ಬಂಟ್ವಾಳದ ಕೃಷಿಕ ಗಣಪತಿ ಭಟ್‌ ಅವರು ಆವಿಷ್ಕರಿಸಿರುವ ಅಡಿಕೆ ಮರ ಏರುವ ಬೈಕ್ ಯಂತ್ರ ಭಾರೀ ಸುದ್ದಿ ಮಾಡುತ್ತಿದೆ. ರಾಷ್ಟ್ರಮಟ್ಟದಲ್ಲೂ ಗಣಪತಿ ಭಟ್ ಅವರ ಬೈಕ್ ಯಂತ್ರ ಗಮನ ಸೆಳೆದಿದೆ. ಗಣಪತಿ ಭಟ್ ಅವರ ಅಡಿಕೆ ಮರ ಏರುವ ಬೈಕ್ ಮಹೀಂದ್ರ ಸಂಸ್ಥೆಯ ಅಧ್ಯಕ್ಷ ಆನಂದ್ ಮಹೀಂದ್ರ ಅವರನ್ನು ಆಕರ್ಷಿಸಿದ್ದು ಅವರು ಸಹ ಮೆಚ್ಚುಗೆ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ.

ಬಂಟ್ವಾಳದ ಸಜಿಪಮುನ್ನೂರು ಗ್ರಾಮದ ಕೋಮಾಲಿ ಕೃಷಿಕ ಗಣಪತಿ ಭಟ್ ಆವಿಷ್ಕಾರ  ಮಾಡಿರುವ ಯಂತ್ರ ನಿಜಕ್ಕೂ ರೈತ ಸ್ನೇಹಿಯಾಗಿದೆ.  ಅಡಿಕೆ ಮದ್ದು ಸಿಂಪಡಣೆ ಮತ್ತು ಕೊಯ್ಲಿಗೆ ಅತಿ ಅಗತ್ಯ ಎಂಬ ರೀತಿಯಲ್ಲಿ ರೂಪಗೊಂಡಿದೆ.

ಮಂಗನ ಕಾಯಿಲೆಗೆ ಮದ್ದು ಕಂಡುಹಿಡಿದ ಮಲೆನಾಡ ಹುಡುಗ..ಸಂಪೂರ್ಣ ಉಚಿತ

ಯಂತ್ರದ ಪೂರ್ವಾಪರ: ಮೋಟಾರ್ ಆಧಾರಿತ ಯಂತ್ರ 28 ಕೆಜಿ ತೂಕವಿದೆ. 2 ಸ್ಟ್ರೋಕ್ ಎಂಜಿನ್ ಬಳಕೆ ಮಾಡಲಾಗಿದೆ. 75 ಕೆಜಿ ತೂಕದ ವ್ಯಕ್ತಿ ಆರಾಮವಾಗಿ ಇದರ ಮೇಲೆ ಕುಳಿತು ಕೆಲಸ ಮಾಡಬಹುದು.

30 ಸೆಕೆಂಡ್ ನಲ್ಲಿ ಅಡಿಕೆ ಮರದ ತುದಿ ತಲುಪಬಹುದು. ಪೆಟ್ರೋಲ್ ಮೂಲಕ ಕೆಲಸ ಮಾಡುವ ಯಂತ್ರಕ್ಕೆ ಬೈಕ್ ರೀತಿಯಲ್ಲೇ ಹ್ಯಾಂಡಲ್, ಬ್ರೇಕ್ ಅಳವಡಿಕೆ ಮಾಡಲಾಗಿದೆ. ಒಂದು ಲೀಟರ್ ಪೆಟ್ರೋಲ್ ನಲ್ಲಿ 80 ರಿಂದ 90 ಮರ ಏರಲು ಸಾಧ್ಯವಿದ್ದು ಕೃಷಿ ಕೂಲಿ ಕಾರ್ಮಿಕರ ಸಮಸ್ಯೆ ಎದುರಿಸುತ್ತಿರುವ ಈ ದಿನಗಳಲ್ಲಿ  ಅಡಿಕೆ ಬೆಳೆಗಾರನಿಗೆ ನೆಮ್ಮದಿ ತಂದುಕೊಡುವುದರಲ್ಲಿ ಅನುಮಾನ ಇಲ್ಲ.

75 ಸಾವಿರ ರೂ. ವೆಚ್ಚ: ಯಂತ್ರ  ತಯಾರಿಕೆಗೆ 75 ಸಾವಿರ ರೂ. ತಗುಲಿದೆ. ವಿದೇಶಗಳಿಂದಲೂ ಯಂತ್ರಕ್ಕೆ ಬೇಡಿಕೆ ಬರುತ್ತಿದೆ ಎಂದು ಭಟ್ಟರು ತಿಳಿಸುತ್ತಾರೆ.

ನನಗೆ ಇದರಿಂದ ಹಣ ಮಾಡುವ ಯೋಚನೆ ಇಲ್ಲ. ಯಾವುದೇ ಕಾರ್ಪೋರೇಟ್ ಕಂಪನಿಗೆ ನಮ್ಮ ಐಡಿಯಾ ಮಾರುವುದಿಲ್ಲ. ಇದೇನಿದ್ದರೂ ರೈತರ ಅನುಕೂಲಕ್ಕಾಗಿ ಬಳಕೆಯಾಗಬೇಕು.ಸಾಧ್ಯವಾದರೆ ಸರಕಾರ ರೈತರಿಗೆ ಯಂತ್ರದ ಖರೀದಿ ಮೇಲೆ ಸಬ್ಸಿಡಿ ನೀಡುವಂತಹ ಕೆಲಸ ಮಾಡಬೇಕು ಎಂದು ಭಟ್ಟರು ಒತ್ತಾಯಿಸುತ್ತಾರೆ.

"

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಂಧರ ವಿಶ್ವಕಪ್ ಹೀರೋಯಿನ್ಸ್‌ಗಳಿಗೆ ದೊಡ್ಮನೆಯಿಂದ ಗೌರವ: ರಾಜ್ ಕುಟುಂಬದ ಆತಿಥ್ಯಕ್ಕೆ ಮೈಮರೆತ ಚಾಂಪಿಯನ್ನರು!
Vastu Shastra: ನೆನಪಿಡಿ, ಅದೃಷ್ಟ ಕೈಹಿಡಿಯಲು ದೇವಸ್ಥಾನಕ್ಕೆ ಈ ಮೂರು ವಸ್ತುಗಳನ್ನ ಗುಟ್ಟಾಗಿ ದಾನ ಮಾಡ್ಬೇಕು!