ಸುಳ್ಳು ಸುದ್ದಿ ಹಬ್ಬಿಸುವುದು ಜನದ್ರೋಹ - ಎಚ್ ಕೆ ಪಾಟೀಲ್

Published : Jul 01, 2019, 12:37 PM ISTUpdated : Jul 01, 2019, 01:17 PM IST
ಸುಳ್ಳು ಸುದ್ದಿ ಹಬ್ಬಿಸುವುದು ಜನದ್ರೋಹ - ಎಚ್ ಕೆ ಪಾಟೀಲ್

ಸಾರಾಂಶ

ಆನಂದ್ ಸಿಂಗ್ ರಾಜೀನಾಮೆ ವಿಚಾರ ನನಗೆ ಹೆಚ್ಚು ಅಚ್ಚರಿ ಉಂಟು ಮಾಡಿದೆ ಎಂದು ಕೈ ಮುಖಂಡ ಎಚ್.ಕೆ.ಪಾಟೀಲ್ ಹೇಳಿದ್ದಾರೆ. ಬಿಜೆಪಿ ಯಾವುದೇ ಪ್ರಯತ್ನ ಮಾಡಿದರೂ ಸರ್ಕಾರ ಬೀಳಿಸುವ ಕೆಲಸ ಸಫಲವಾಗಲ್ಲ ಎಂದರು.

ಗದಗ [ಜು.1] :  ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ರಾಜೀನಾಮೆ ನೀಡಿರುವ ವಿಚಾರ ನನಗೆ ಹೆಚ್ಚು ಅಚ್ಚರಿಯನ್ನುಂಟು ಮಾಡಿದೆ ಎಂದು ಶಾಸಕ ಎಚ್.ಕೆ.ಪಾಟೀಲ್ ಹೇಳಿದ್ದಾರೆ. 

ಗದಗ್ ನಲ್ಲಿ ಮಾತನಾಡಿದ ಎಚ್. ಕೆ. ಪಾಟೀಲ್, ಆನಂದ್ ನಮ್ಮ ನಮ್ಮ ಪಕ್ಷದ ತತ್ವ ಸಿದ್ದಾಂತ ಒಪ್ಪಿ ಸೇರಿದ್ದರು. ಕ್ರಿಯಾಶೀಲರಾಗಿ ಕೆಲಸ ಮಾಡುತ್ತಿದ್ದರು. ರಾಜೀನಾಮೆ ವಿಚಾರ ಸುಳ್ಳು ಎನಿಸುತ್ತಿದೆ ಎಂದರು. 

ಇನ್ನೂ 9 ಶಾಸಕರು ರಾಜೀನಾಮೆ‌ ನೀಡಲಿದ್ದಾರೆ ಎನ್ನುವ ವಿಚಾರವಾಗಿಯೂ ಮಾತನಾಡಿದ ಅವರು ಇದೆಲ್ಲವೂ ಕೂಡ ಊಹಾಪೋಹ. ಇದರಲ್ಲಿ ಯಾವುದೇ ಸತ್ಯವಿಲ್ಲ.  ಇದು ರಾಜ್ಯದ ಅಭಿವೃದ್ಧಿಗೆ ಹಿತಕಾರಿಯೂ ಅಲ್ಲ. ಇಂತಹ ಸುದ್ದಿಗಳನ್ನು ಹಬ್ಬಿಸುವುದು ಜನದ್ರೋಹಿ ಕೆಲಸ ಎಂದರು. 

ಬಿಜೆಪಿಯ ಸರ್ಕಾರ ಕೆಡವುವ ಪ್ರಯತ್ನವನ್ನು ನಿರಂತರವಾಗಿ ಮಾಡುತಿದ್ದು, ರಾಜಕಾರಣವನ್ನು ಡೋಲಾಯಮಾನಗೊಳಿಸುವ ಯತ್ನ ನಡೆಸುತ್ತಿದೆ. ಅಭಿವೃದ್ಧಿಗೆ ವಿರುದ್ಧವಾಗಿ ಕೆಲಸ ಮಾಡುತ್ತಿದ್ದು, ಇಂತಹ ಕೆಟ್ಟ ಕೆಲಸಕ್ಕೆ ಕೈ ಹಾಕೋದೇ ದುರ್ದೈವದ ಸಂಗತಿ. ನಿರಂತರವಾಗಿ ಸರ್ಕಾರ ಬೀಳಿಸುವ ತಂತ್ರ ನಡೆಸುತಿದ್ದು, ಹೇಳಿಕೆ ನೀಡುತ್ತಿದ್ದಾರೆ. ಆದರೆ ಅವರು ಈ ಕೆಲಸದಲ್ಲಿ ಯಶಸ್ವಿಯಾಗುವುದಿಲ್ಲ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸೌಟು, ಕುಕ್ಕರ್ ಹಿಡಿದು ನಿಲ್ಲಿ, SIR ವಿರುದ್ಧ ಹೋರಾಟಕ್ಕೆ ಮಹಿಳೆಯರಿಗೆ ಸಿಎಂ ಮಮತಾ ಬ್ಯಾನರ್ಜಿ ಕರೆ
ಮೈಸೂರು ಅರಮನೆ ವರಹ ದ್ವಾರದ ಮೇಲ್ಛಾವಣಿ ಕುಸಿತ; ಪ್ರವಾಸಿಗರ ಗೈರಿನಿಂದ ತಪ್ಪಿದ ಭಾರೀ ಅನಾಹುತ