ದಕ್ಷಿಣ ಕನ್ನಡ, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆ ಬಿಟ್ಟರೆ ರಾಜ್ಯದಲ್ಲಿ ಮತ್ಯಾರಿಗೂ ಕನ್ನಡ ಸರಿಯಾಗಿ ಬರಲ್ಲ, ಯೋಗ್ಯತೆಯೂ ಇಲ್ಲ

Published : Feb 17, 2018, 06:50 PM ISTUpdated : Apr 11, 2018, 12:48 PM IST
ದಕ್ಷಿಣ ಕನ್ನಡ, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆ ಬಿಟ್ಟರೆ ರಾಜ್ಯದಲ್ಲಿ ಮತ್ಯಾರಿಗೂ ಕನ್ನಡ ಸರಿಯಾಗಿ ಬರಲ್ಲ, ಯೋಗ್ಯತೆಯೂ ಇಲ್ಲ

ಸಾರಾಂಶ

ಇಂಗ್ಲಿಷ್‌ ಅನ್ನು ಶುದ್ಧ ಕನ್ನಡಕ್ಕೆ ಭಾಷಾಂತರ ಮಾಡುವುದೇ ಇಂದು ಸವಾಲು

ಮಂಗಳೂರು(ಫೆ.17): ವಿವಾದಗಳಿಂದಲೇ ಪ್ರಸಿದ್ಧರಾಗಿರುವ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿ ಮತ್ತೆ ಸುದ್ದಿಯಾಗಿದ್ದಾರೆ.

'ನಾನು ಶುದ್ಧ ಕನ್ನಡದಲ್ಲಿ ಮಾತನಾಡಿದ್ರೆ ಯಾರಿಗೂ ಅರ್ಥವಾಗಲ್ಲ.ಅದರಲ್ಲೂ ಬೆಂಗಳೂರಿಗರಿಗೆ ಶುದ್ಧ ಕನ್ನಡ ಅರ್ಥವಾಗುವುದೇ ಇಲ್ಲ. ಇತ್ತೀಚೆಗೆ ಕನ್ನಡ ಬರೆಯಲು ಯಾರಿಗೂ ಬರುತ್ತಿಲ್ಲ. ಇಂಗ್ಲಿಷ್‌ ಅನ್ನು ಶುದ್ಧ ಕನ್ನಡಕ್ಕೆ ಭಾಷಾಂತರ ಮಾಡುವುದೇ ಇಂದು ಸವಾಲು. ಕರ್ನಾಟಕದಲ್ಲಿ ಶುದ್ಧ ಕನ್ನಡ ಯಾರಲ್ಲೂ ಇಲ್ಲ. ದಕ್ಷಿಣ ಕನ್ನಡ, ಶಿವಮೊಗ್ಗ, ಉತ್ತರ ಕನ್ನಡದ ಹಳ್ಳಿಗರನ್ನು ಹೊರತುಪಡಿಸಿ ಕನ್ನಡ ಯಾರಿಗೂ ಬರುತ್ತಿಲ್ಲ'ಎಂದು ಹೇಳಿದರು.

ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರಧಾನ ಮಂತ್ರಿ ಕೌಶಲ್ಯ ಯೋಜನೆ ಅಡಿಯಲ್ಲಿ ಆರಂಭಿಸಲಾದ ಉಚಿತ ತಾಂತ್ರಿಕ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ  ಮಾತನಾಡಿದ ಅವರು, ಈ ಮೂರು ಜಿಲ್ಲೆಗಳನ್ನು ಹೊರತುಪಡಿಸಿದರೆ ಕನ್ನಡದ ಯೋಗ್ಯತೆಯೇ ಯಾರಿಗೂ ಇಲ್ಲ' ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಸುಗಳಿಗೆ ಅಲಂಕಾರ ಮಾಡಿ ಕಿಚ್ಚು ಹಾಯಿಸಿದ ರೈತರು; ನಾಡಿನಾದ್ಯಂತ ಮಕರ ಸಂಕ್ರಾಂತಿಯ ಸಂಭ್ರಮ
ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್‌ಗೌಡ ವಿರುದ್ಧ 2 ಕೇಸ್‌, ಬೆನ್ನಲ್ಲೇ ನಾಪತ್ತೆ; 3 ತಂಡ ರಚಿಸಿ ಪೊಲೀಸರ ಶೋಧ ಕಾರ್ಯ!