ಸಿಎಂ ಸಿದ್ದರಾಮಯ್ಯ ಕುಂಬಕರ್ಣನ ವಂಶದವರು : ಅನಂತ್ ಕುಮಾರ್ ಹೆಗಡೆ

Published : Jan 17, 2018, 01:19 PM ISTUpdated : Apr 11, 2018, 12:50 PM IST
ಸಿಎಂ ಸಿದ್ದರಾಮಯ್ಯ ಕುಂಬಕರ್ಣನ ವಂಶದವರು : ಅನಂತ್ ಕುಮಾರ್ ಹೆಗಡೆ

ಸಾರಾಂಶ

ಕುಂಬಕರ್ಣ ಬೇಜಾರಾಗಿದ್ದಾರೆ ಎಂದು ನನಗೆ ಶ್ರೀಲಂಕಾದಿಂದ ವಾಟ್ಸಾಪ್ ಬಂದಿದೆ. ಸಿದ್ದರಾಮಯ್ಯ ಯಾವಾಗಿದ್ದರೂ ಕೂಡ ನಮ್ಮ ವಂಶದವರು ಎಂದಿದೆ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಹೇಳಿದ್ದಾರೆ.

ಬೆಂಗಳೂರು (ಜ.17): ಕುಂಬಕರ್ಣ ಬೇಜಾರಾಗಿದ್ದಾರೆ ಎಂದು ನನಗೆ ಶ್ರೀಲಂಕಾದಿಂದ ವಾಟ್ಸಾಪ್ ಬಂದಿದೆ. ಸಿದ್ದರಾಮಯ್ಯ ಯಾವಾಗಿದ್ದರೂ ಕೂಡ ನಮ್ಮ ವಂಶದವರು ಎಂದಿದೆ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಹೇಳಿದ್ದಾರೆ.

ನಾಲ್ಕು ವರ್ಷದ ನಂತರ ಸಿದ್ದರಾಮಯ್ಯಗೆ ಕನಸು ಬೀಳುತ್ತಿದೆ ಅಂದರೆ ಗಡದ್ ನಿದ್ದೆ ಮಾಡುತ್ತಿದ್ದಾರೆ.  ಈ ರೀತಿ ನಿದ್ದೆ ಮಾಡುವ ಸಿದ್ದರಾಮಯ್ಯ ಬೇಕಾ, ಅಥವಾ ಉತ್ತಮ ಆಡಳಿತವನ್ನು ನೀಡುವ ಯಡಿಯೂರಪ್ಪ ನಿಮಗೆ ಬೇಕಾ ಎಂದು ನೀವೇ ತೀರ್ಮಾನ ಮಾಡಿ.

ರಾಜ್ಯದ 224 ಕ್ಷೇತ್ರಗಳಿಗೆ ಯಾರಾದರೂ ಹೋಗಿದ್ದಾರಾ..? ಎಂದು ಪ್ರಶ್ನೆ ಮಾಡಿದ್ದಾರೆ. ಅಲ್ಲದೇ  ಕುಮಾರಸ್ವಾಮಿಗೆ ಪಂಕ್ಚರ್ ಆಗಿದೆ. ಹೋಗೋಕೆ ಆಗಲ್ಲ. ಸಿಎಂ-ಪರಂ ನಡುವೆ ಜಗಳವಾಗಿದೆ. ಹಾಗಾಗಿ ತರಲೆ ತಂಟೆ ಇಲ್ಲದ ಯಡಿಯೂರಪ್ಪ ಅವರು ಮೋದಿ ವೇಗದಲ್ಲಿ ಹೋಗುತ್ತಿದ್ದಾರೆ. ಮುಂದಿನ ತಿಂಗಳು ನಾಲ್ಕನೇ ತಾರೀಕು ಪ್ರಧಾನಿ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರದ ಹಣದಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಆದರೆ ಬಿಜೆಪಿ ಪರಿವರ್ತನಾ ಯಾತ್ರೆ ಕಾರ್ಯಕರ್ತರ ಬೆವರಿನ ಹನಿಯಾಗಿದೆ ಎಂದು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಎಂ ಬುಲಾವ್ ನೀಡಿದ್ರೂ ಬಾರದ ಅಧಿಕಾರಿ; ಐಎಎಸ್ ಪಂಕಜ್ ಕುಮಾರ್ ಪಾಂಡೆಗೆ ನೋಟೀಸ್?
ಮಾದಪ್ಪನ ಭಕ್ತರ ಮೇಲೆ ಚಿರತೆ ದಾಳಿ: ಪ್ರಕರಣ ಮರುಕಳಿಸದಂತೆ ಅಧಿಕಾರಿಗಳಿಗೆ ಸಚಿವ ವೆಂಕಟೇಶ್ ಸೂಚನೆ