
ಶಿರಸಿ: ಅಹವಾಲು ಹೇಳಿಕೊಳ್ಳಲು ಬಂದ ಮಹಿಳೆಗೆ ನಿಮ್ಮ ಶಾಸಕರೇನು ಸತ್ತು ಹೋಗಿದ್ದಾರಾ ಎಂದು ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಕೇಳಿದ ಘಟನೆ ಬನವಾಸಿಯಲ್ಲಿ ನಡೆದಿದೆ. ಕಾರ್ಯಕ್ರಮವೊಂದನ್ನು ಮುಗಿಸಿ ಹೆಗಡೆ ಅವರು ಹೋಗುತ್ತಿದ್ದಾಗ ಮಹಿಳೆಯೊಬ್ಬರು ಎದುರಾಗಿ, ಬನವಾಸಿಯ ಸಾರ್ವಜನಿಕ ಆಸ್ಪತ್ರೆಗೆ ವೈದ್ಯರು ಬೇಕಾಗಿದ್ದಾರೆ.
ಸಾವಿರಾರು ಗ್ರಾಮಸ್ಥರಿಗೆ ಅನುಕೂಲವಾಗಲಿರುವ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ವೈದ್ಯರನ್ನು ನೇಮಕ ಮಾಡಿ ಎಂದು ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಅನಂತಕುಮಾರ ಹೆಗಡೆ ಅವರು, ನಿಮ್ಮ ಶಾಸಕರೇನು ಸತ್ತೋಗಿದ್ದಾರಾ? ಎಂದು ಕೇಳಿದರು.
ನಮಗೆ ನೀವೇ ಶಾಸಕರೆಂದು ನಕ್ಕ ಮಹಿಳೆಗೆ, ಹಾಗಿದ್ದರೆ ಸರಿ ಬಿಡಿ ಎಂದು ಸಚಿವರು ಅಲ್ಲಿಂದ ತೆರಳಿದರು. ಬನವಾಸಿಯು ಯಲ್ಲಾಪುರ ವಿಧಾನಸಭಾ ಕ್ಷೇತ್ರಕ್ಕೆ ಸೇರುತ್ತದೆ. ಈ ಕ್ಷೇತ್ರಕ್ಕೆ ಕಾಂಗ್ರೆಸ್ನ ಶಿವರಾಮ್ ಹೆಬ್ಬಾರ್ ಶಾಸಕರಾಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.