ಬೆಂಗಳೂರು ದಕ್ಷಿಣ: ತೇಜಸ್ವಿನಿ ಅನಂತ್‌ಕುಮಾರ್‌ ಸ್ಪರ್ಧೆ ಫಿಕ್ಸ್?

By Web DeskFirst Published Dec 18, 2018, 2:55 PM IST
Highlights

ಬೆಂಗಳೂರು ದಕ್ಷಿಣ ಕ್ಷೇತ್ರಕ್ಕೆ ದಿವಂಗತ ಅನಂತ್‌ಕುಮಾರ್‌ ಅವರ ಪತ್ನಿ ತೇಜಸ್ವಿನಿ ಅವರನ್ನೇ ಕಣಕ್ಕಿಳಿಸುವ ಚಿಂತನೆಯನ್ನು ಬಿಜೆಪಿ ಮಾಡಿದೆ. ರಾಜ್ಯ ಬಿಜೆಪಿ ನಾಯಕರು ಸಹ ತೇಜಸ್ವಿನಿ ಅವರೇ ಸ್ಪರ್ಧೆ ಮಾಡಬೇಕು ಎಂಬ ಒಲವು ತೋರಿಸಿದ್ದಾರೆ.

ಬೆಂಗಳೂರು[ಡಿ.18]  2019ರ ಲೋಕಸಭಾ ಚುನಾವಣೆಗೆ ಸಮೀಪಿಸುತ್ತಿದೆ. ಇದೇ ವೇಳೆ ವಿವಿಧ ಪಕ್ಷಗಳು ಚುನಾವಣಾ ಸಿದ್ಧತೆಯಲ್ಲಿ ತೊಡಗಿವೆ. ಇದೇ ವೇಳೆ ಮಾಜಿ ಸಚಿವ ದಿವಂಗತ ಅನಂತ್ ಕುಮಾರ್ ಅವರ ಕ್ಷೇತ್ರವಾದ ಬೆಂಗಳೂರು ದಕ್ಷಿಣದಿಂದ ಅವರ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಅವರಿಗೆ ಬಿಜೆಪಿಯಿಂದ ಟಿಕೆಟ್ ನೀಡಿ ಕಣಕ್ಕೆ ಇಳಿಸುವ ಸಾಧ್ಯತೆ ಇದೆ. 

ಆದರೆ ಈ ಬಗ್ಗೆ ತೇಜಸ್ವಿನಿ ಅನಂತ್ ಕುಮಾರ್ ಅವರು ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ. ಇಂಜಿಯರಿಂಗ್ ಗ್ರಾಜುಯೇಟ್ ಆಗಿರುವ ತೇಜಸ್ವಿನಿ ಅವರು ಅದಮ್ಯ ಚೇತನ ಸಂಸ್ಥೆ ನಡೆಸುತ್ತಿದ್ದು, ಜವಾಬ್ದಾರಿಯನ್ನು ಹೊರುವ ಸಾಮರ್ಥ್ಯ ಅವರಲ್ಲಿ ಇರುವ ಕಾರಣ ಟಿಕೆಟ್ ನೀಡುವ ಬಗ್ಗೆ ಚಿಂತನೆ ನಡೆಸಿದ್ದು, ಈ ಮೂಲಕ ಅವರು ರಾಜಕೀಯ ರಂಗಕ್ಕೆ ತರುವ ಯತ್ನ ನಡೆಸಲಾಗುತ್ತಿದೆ. 

ಸಹಪಾಠಿಯನ್ನೇ ಬಾಳ ಸಂಗಾತಿ ಮಾಡಿಕೊಂಡ ಅನಂತ್

ಬೆಂಗಳೂರು ದಕ್ಷಿಣ  ಕ್ಷೇತ್ರಕ್ಕೆ ಚಿರಪರಿಚಿತರೇ ಆಗಿರುವ ಅವರು, ಈ ಕ್ಷೇತ್ರದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಅಭಿವೃದ್ಧಿ ಕೆಲಸಗಳಲ್ಲಿ ಪಾಲ್ಗೊಂಡಿದ್ದಾರೆ. ಅವರೆ ತಮ್ಮದೇ ಆದ ಅದಮ್ಯ ಚೇತನದ ಮೂಲಕ ಮನೆಮಾತಾಗಿದ್ದಾರೆ. ಅಲ್ಲದೇ ಬಿಜೆಪಿಗೂ ಆ ಕ್ಷೇತ್ರದಲ್ಲಿ ಒಬ್ಬ ಉತ್ತಮ ಅಭ್ಯರ್ಥಿ ಬೇಕಾಗಿದೆ. 

ಅನಂತ್‌ ಇಲ್ಲದ ಭಾನುವಾರ, ನಿಲ್ಲದ ತೇಜಸ್ವಿನಿ ಹಸಿರು ಸಾಕ್ಷಾತ್ಕಾರ

ಜಯನಗರ ವಿಧಾನಸಭಾ ಕ್ಷೇತ್ರವನ್ನು ಬಿಜೆಪಿಯ ವಿಜಯ್‌ಕುಮಾರ್ ಪ್ರತಿನಿಧಿಸುತ್ತಿದ್ದರು. ಆದರೆ ಅವರ ಅಕಾಲಿಕ ಮರಣದ ನಂತರ ಕಾಂಗ್ರೆಸ್‌ನ ಸೌಮ್ಯಾ ರೆಡ್ಡಿ ಕಾಂಗ್ರೆಸ್‌ನಿಂದ ಆಯ್ಕೆಯಾಗಿ ಬಂದಿದ್ದರು.

click me!