
ಬೆಂಗಳೂರು: ರಾಜ್ಯದ ಕೆಲ ಬಿಜೆಪಿ ನಾಯಕರು ಬಾಯಿಗೆ ಬಂದಂತೆ ಮಾತನಾಡುತ್ತಿದ್ದು, ಇದು ಸರಿಯಲ್ಲ ಎಂದು ಕೇಂದ್ರ ಸಚಿವ ಅನಂತಕುಮಾರ್ ಅವರು ಮತ್ತೊಬ್ಬ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ವಿರುದ್ಧ ಪರೋಕ್ಷವಾಗಿ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ನಡೆದ ಬಿಜೆಪಿ ರಾಜ್ಯಕಾರಿಣಿ ಸಭೆಯ ಸಮಾರೋಪ ಭಾಷಣದಲ್ಲಿ ಅನಂತಕುಮಾರ್ ಅವರು ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ
ಅವರಿಗೆ ಚಾಟಿ ಬೀಸಿದ್ದಾರೆ ಎಂದು ತಿಳಿದು ಬಂದಿದೆ.
ರಾಜ್ಯದ ಕೆಲ ನಾಯಕರು ಬಾಯಿಗೆ ಬಂದಂತೆ ಮಾತನಾಡುವುದನ್ನು ಬಿಡಬೇಕು. ಹಳ್ಳಿ ಕಡೆ ದನಗಳು ಮೇಯಲು ಹೋಗುತ್ತವೆ. ಕೆಲವು ಸರಿಯಾದ ದಾರಿಯಲ್ಲೆ ಸಾಗಿದರೆ, ಮತ್ತೆ ಕೆಲವು ದನಗಳು ಅಡ್ಡಾ ದಿಡ್ಡಿ ಮಾರ್ಗ ಅನುಸರಿಸುತ್ತವೆ.
ದೇ ರೀತಿ ಪಕ್ಷದಲ್ಲೂ ಇತಿಮಿತಿ ಮೀರಿ ಬಾಯಿಗೆ ಬಂದಂತೆ ಪ್ರತಿಯಿಕ್ರಿಸುತ್ತಾರೆ ಎಂದು ಯಾರ ಹೆಸರು ಪ್ರಸ್ತಾಪಿಸದೆ ಖಾರ ವಾಗಿ ಹೇಳಿದ್ದಾರೆ. ಪ.ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಅಮೆರಿಕಾ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಎಲ್ಲಿಯೊ ಮಾತನಾಡಿ ದ್ದಕ್ಕೆ ನಾವು ಪ್ರತಿ ಕ್ರಿಯೆ ನೀಡಿದರೆ ಹೇಗಿರುತ್ತದೊ, ಅಷ್ಟೇ ಇವರ ಮಾತು ಅಪ್ರಸ್ತುತ ಎಂದರು.
ಲೋಕಸಭೆಯಲ್ಲಿ ಬಿಜೆಪಿಗೆ 300 ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ಅವಕಾಶ ಇದೆ. ಪಕ್ಷದ ನಿಲುವು, ಮಿತಿ ಮೀರಿ ಮಾತನಾಡು ವುದನ್ನು ನಾಯಕರು ಸ್ವಯಂ ನಿಯಂತ್ರಣ ಹಾಕಿಕೊಳ್ಳಬೇಕು ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.