
ಬೆಂಗಳೂರು: 'ಸಂವಿಧಾನವೇ ನನಗೆ ಸುಪ್ರೀಂ,' ಎಂದು ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆ ಸಂಸತ್ತಿನಲ್ಲಿ ಸ್ಪಷ್ಟನೆ ನೀಡಿದ್ದು, ಸಂವಿಧಾನ ತಿದ್ದುಪಡಿ ವಿಚಾರಕ್ಕೆ ಸಂಬಂಧಿಸಿದಂತೆ ಭುಗಿಲೆದ್ದ ವಿವಾದವನ್ನು ತಣ್ಣಗಾಗಿಸಲು ಯತ್ನಿಸಿದ್ದಾರೆ.
'ನನ್ನ ಹೇಳಿಕೆಯಿಂದ ಯಾರಿಗಾದರೂ ಅಪಮಾನವಾಗಿದ್ದರೆ ಅಥವಾ ನೋವಾಗಿದ್ದರೆ ಕ್ಷಮೆಯಾಚಿಸುತ್ತೇನೆ,' ಎಂದು ಹೇಳಿದರು.
'ಜಾತ್ಯತೀತರು ಎಂದು ಹೇಳಿಕೊಳ್ಳುವವರಿಗೆ ಅವರ ಅಪ್ಪ-ಅಮ್ಮನ ರಕ್ತದ ಪರಿಚವಯೇ ಇರುವುದಿಲ್ಲ, ನಾವು ಸಂವಿಧಾನವನ್ನು ಬದಲಿಸುತ್ತೇವೆ, ಅದಕ್ಕೇ ಬಂದಿದ್ದೇವೆ,' ಎಂದ ಅನಂತ ಕುಮಾರ್ ಹೆಗಡೆ ಹೇಳಿಕೆ ವಿಪರೀತ ಟೀಕೆಗೆ ಗುರಿಯಾಗಿತ್ತು.
ಹೆಗಡೆ ಹೇಳಿಕೆ ಖಂಡಿಸಿ, ಕಾಂಗ್ರೆಸ್ ಆದಿಯಾದಿ ಪ್ರತಿಪಕ್ಷಗಳು ಸಚಿವರ ಹೇಳಿಕೆ ವಿರುದ್ಧ ಬಾವಿಗೆ ಇಳಿದು ಪ್ರತಿಭಟನೆ ನಡೆಸಿದ್ದವು.
ಚಳಿಗಾಲದ ಅಧಿವೇಶನ ನಡೆಯುತ್ತಿರುವ ಉಭಯ ಸದನಗಳಲ್ಲೂ ಬುಧವಾರ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು. ಹೆಗಡೆ ಬೆಂಬಲಕ್ಕೆ ನಿಲ್ಲದ ಸರಕಾರ, ಸಚಿವರ ಹೇಳಿಕೆಯಿಂದ ದೂರ ಸರಿದಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.