ಕಾಶ್ಮೀರ: ಅನಂತ್'ನಾಗ್ ಲೋಕಸಭಾ ಕ್ಷೇತ್ರ ಉಪಚುನಾವಣೆ ರದ್ದು

Published : May 02, 2017, 04:47 AM ISTUpdated : Apr 11, 2018, 12:54 PM IST
ಕಾಶ್ಮೀರ: ಅನಂತ್'ನಾಗ್ ಲೋಕಸಭಾ ಕ್ಷೇತ್ರ ಉಪಚುನಾವಣೆ ರದ್ದು

ಸಾರಾಂಶ

ಏ. 8ರಂದೇ ಅನಂತನಾಗ್ ಕ್ಷೇತ್ರಕ್ಕೆ ಚುನಾವಣೆಯಾಗಬೇಕಿತ್ತು. ಅಂದು ಹಿಂಸಾಚಾರ ನಡೆದ ಹಿನ್ನೆಲೆಯಲ್ಲಿ ಏ. 12ಕ್ಕೆ ಚುನಾವಣೆ ಮುಂದೂಡಲಾಯಿತು. ಬಳಿಕ ಮೇ 25ಕ್ಕೆ ಚುನಾವಣೆಯನ್ನು ಮುಂದೂಡಲಾಯಿತು. ಇದೀಗ, ಸರಿಯಾದ ಭದ್ರತಾ ವ್ಯವಸ್ಥೆ ಸಾಧ್ಯವಿಲ್ಲದ್ದರಿಂದ ಚುನಾವಣೆಯನ್ನೇ ರದ್ದುಗೊಳಿಸಲು ನಿರ್ಧರಿಸಲಾಗಿದೆ.

ನವದೆಹಲಿ(ಮೇ 02): ಕಣಿವೆ ರಾಜ್ಯದಲ್ಲಿ ಭದ್ರತಾ ಪರಿಸ್ಥಿತಿ ಬಿಗಡಾಯಿಸಿರುವ ಹಿನ್ನೆಲೆಯಲ್ಲಿ ಅನಂತನಾಗ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯನ್ನು ಚುನಾವಣಾ ಆಯೋಗ ರದ್ದುಗೊಳಿಸಿದೆ. ಚುನಾವಣೆ ನಿರ್ವಹಣೆಗೆ ಸರಿಯಾದ ಭದ್ರತೆ ಒದಗಿಸಲು ಅಸಾಧ್ಯವಾಗುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಉಗ್ರಗಾಮಿ ಹಾಗೂ ದೇಶವಿರೋಧಿ ಚಟುವಟಿಕೆಗಳು ಹೆಚ್ಚಾಗಿರುವ ಅನಂತ್'ನಾಗ್ ಜಿಲ್ಲೆಯಲ್ಲಿ ಚುನಾವಣೆ ನಿರ್ವಹಣೆಗೆ ತನಗೆ 740 ಪ್ಯಾರಾಮಿಲಿಟರಿ ಕಂಪನಿಗಳ (74 ಸಾವಿರ ಸೈನಿಕರು) ಅಗತ್ಯವಿದೆ ಎಂದು ಚುನಾವಣಾ ಆಯೋಗವು ಗೃಹ ಸಚಿವಾಲಯಕ್ಕೆ ಮನವಿ ಮಾಡಿಕೊಂಡಿತ್ತು. ಆದರೆ, ಕಾಶ್ಮೀರದಲ್ಲೀಗ ವಿಷಮ ಸ್ಥಿತಿ ಇರುವುದರಿಂದ 300 ಕಂಪನಿಗಳನ್ನು ಮಾತ್ರ ಕೊಡುವುದಾಗಿ ಗೃಹ ಸಚಿವಾಲಯ ಹೇಳುತ್ತಿದೆ.

ಅಚ್ಚರಿ ಎಂದರೆ, ಇತ್ತೀಚೆಗೆ ನಡೆದ ಪಂಚರಾಜ್ಯ ಚುನಾವಣೆಗೆ ಬಳಕೆಯಾಗಿದ್ದು 70 ಸಾವಿರ ಪ್ಯಾರಾಮಿಲಿಟರಿ ಪಡೆ ಮಾತ್ರ. ಈಗ ಅನಂತನಾಗ್ ಕ್ಷೇತ್ರವೊಂದಕ್ಕೇ ಅದಕ್ಕಿಂತ ಹೆಚ್ಚು ಸೇನಾಪಡೆಗಳನ್ನು ಚುನಾವಣಾ ಆಯೋಗ ಕೇಳಿದೆ. ಕಡಿಮೆ ಅವಧಿಯಲ್ಲಿ ಅಷ್ಟು ಸೈನಿಕರನ್ನು ನಿಯೋಜಿಸುವುದು ಅಸಾಧ್ಯ ಎಂದು ಗೃಹ ಸಚಿವಾಲಯ ಸ್ಪಷ್ಟಪಡಿಸಿದೆ.

ಏ. 8ರಂದೇ ಅನಂತನಾಗ್ ಕ್ಷೇತ್ರಕ್ಕೆ ಚುನಾವಣೆಯಾಗಬೇಕಿತ್ತು. ಅಂದು ಹಿಂಸಾಚಾರ ನಡೆದ ಹಿನ್ನೆಲೆಯಲ್ಲಿ ಏ. 12ಕ್ಕೆ ಚುನಾವಣೆ ಮುಂದೂಡಲಾಯಿತು. ಬಳಿಕ ಮೇ 25ಕ್ಕೆ ಚುನಾವಣೆಯನ್ನು ಮುಂದೂಡಲಾಯಿತು. ಇದೀಗ, ಸರಿಯಾದ ಭದ್ರತಾ ವ್ಯವಸ್ಥೆ ಸಾಧ್ಯವಿಲ್ಲದ್ದರಿಂದ ಚುನಾವಣೆಯನ್ನೇ ರದ್ದುಗೊಳಿಸಲು ನಿರ್ಧರಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅ.1ರಿಂದ ಜನವರಿ 31ರ ವರೆಗೆ ಟೋಲ್ ಸಂಗ್ರಹ ಸ್ಥಗಿತಗೊಳಿಸಲು ಸುಪ್ರೀಂ ಕೋರ್ಟ್ ಸೂಚನೆ
ಕಂದಾಯ ಸಚಿವ ಕೃಷ್ಣಬೈರೇಗೌಡ ನಕಲಿ ದಾಖಲೆ ಸೃಷ್ಟಿಸಿ ಜಮೀನು ಕಬಳಿಕೆ ಮಾಡಿರುವ ಗಂಭೀರ ಆರೋಪ