
ಬೆಂಗಳೂರು(ಮೇ.31) ಅಪಘಾತದಲ್ಲಿ ಮೃತಪಟ್ಟ ನಿರೂಪಕ ಚಂದನ್ ಪತ್ನಿ ಮನನೊಂದು ಮಗನನ್ನ ಕೊಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇದೀಗ ತಾಯಿಯಿಂದ ಕೊಲ್ಲಲ್ಪಟ್ಟ 13 ವರ್ಷದ ತುಷಾರ್ ಕಣ್ಣುಗಳನ್ನ ದಾನ ಮಾಡಲು ಚಂದನ್ ಕುಟುಂಬ ನಿರ್ಧರಿಸಿದೆ. ಕಳೆದ 24 ರಂದು ಚಂದನ್ ದಾವಣೆಗೆರೆ ಸಮೀಪ ಕಾರು ಅಪಘಾತದಲ್ಲಿ ಮುೃತಪಟ್ಟಿದ್ದರು. ಇದರಿಂದ ಮನನೊಂದ ಪತ್ನಿ ವೀಣಾ ಇಂದು ಆಸಿಡ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದರು. ವೀಣಾ ಪರಿಸ್ಥಿತಿ ಗಂಭೀರವಾಗಿದ್ದು, ಹೆಬ್ಬಾಳ ಖಾಸಗಿ ಆಸ್ಪತ್ರೆಯಿಂದ ಇದೀಗ ನಿಮಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆಸಿಡ್ ಕುಡಿದು ಅಸ್ವಸ್ಥಳಾಗಿರುವ ಚಂದನ್ ಪತ್ನಿ ವೀಣಾ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ನಿಮಾನ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇದೀಗ ವೀಣಾಗೆ ಚಿಕಿತ್ಸೆ ನೀಡಲಾಗುತ್ತಿದೆ.
ಭೀಕರ ಅಪಘಾತ : ನಿರೂಪಕ ಚಂದನ್ ಸಾವು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.