
ಹೈದರಾಬಾದ್(ಜೂ.05): ಆಂಧ್ರದ ನೂತನ ಸಿಎಂ ಜಗನ್ ಮೋಹನ್ ರೆಡ್ಡಿ ತಮ್ಮ ಕಾರ್ಯವೈಖರಿಯಿಂದ ಈಗಾಗಲೇ ಜನಮಾನಸದಲ್ಲಿ ತಮ್ಮ ಛಾಪು ಮೂಡಿಸಿದ್ದಾರೆ.
ಆಂಧ್ರದ ಶಾರದಾ ಪೀಠಕ್ಕೆ ಭೇಟಿ ನೀಡಿದ್ದ ಜಗನ್, ವಿಮಾನ ನಿಲ್ದಾಣ ಮಾರ್ಗದಲ್ಲಿ ಕ್ಯಾನ್ಸರ್ ಪೀಡಿತ ಬಾಲಕನನ್ನು ತಮ್ಮ ಕಾರಿನಿಂದ ಇಳಿದು ಭೇಟಿಯಾದ ಪ್ರಸಂಗ ನಡೆದಿದೆ.
15 ವರ್ಷದ ನೀರಜ್ ಎಂಬ ಬಾಲಕ ಲ್ಯುಕೆಮಿಯಾ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದು, ಜಗನ್ ತೆರಳುತ್ತಿದ್ದ ದಾರಿಯಲ್ಲಿ ಆತನ ಗೆಳೆಯರು ನೀರಜ್ ಚಿಕಿತ್ಸೆಗೆ ನೆರವಾಗುವಂತೆ ಭಿತ್ತಿಪತ್ರ ಪ್ರದರ್ಶಿಸಿದ್ದಾರೆ.
ಇದನ್ನು ಕಂಡ ಜಗನ್ ಕೂಡಲೇ ತಮ್ಮ ಕಾರಿನಿಂದ ಇಳಿದು ನೀರಜ್ ಗೆಳೆಯರು ಮತ್ತು ಆತನ ಕುಟುಂಬವನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ನೀರಜ್ ಚಿಕಿತ್ಸೆಗಾಗಿ 25 ಲಕ್ಷ ರೂ.ಗಳ ಅವಶ್ಯಕತೆ ಇದ್ದು, ಇದುವರೆಗೂ ಕೇವಲ 40 ಸಾವರಿ ರೂ.ಗಳನ್ನಷ್ಟೇ ಹೊಂದಿಸಲು ಸಾಧ್ಯವಾಗಿದೆ. ಇದನ್ನರಿತ ಜಗನ್ ಸ್ಥಳದಲ್ಲೇ ನೀರಜ್ ಚಿಕಿತ್ಸೆಗಾಗಿ ರಾಜ್ಯ ಸರ್ಕಾರದಿಂದ 20 ಲಕ್ಷ ರೂ.ಗಳ ಆರ್ಥಿಕ ಸಹಾಯ ಘೋಷಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.