
ಅಮರಾವತಿ[ಸೆ.14]: ಸರ್ಕಾರದ ಅಧೀನದಲ್ಲಿರುವ ಎಲ್ಲಾ ಮುಜರಾಯಿ ದೇವಾಲಯಗಳು ಮತ್ತು ದತ್ತಿ ಸಂಸ್ಥೆಗಳ ಆಡಳಿತ ಮಂಡಳಿಯಲ್ಲಿನ ನಾಮನಿರ್ದೇಶಿತ ಹುದ್ದೆಗಳಲ್ಲಿ ಶೇ.50ರಷ್ಟುಮೀಸಲು ಕಲ್ಪಿಸುವ ಐತಿಹಾಸಿಕ ನಿರ್ಧಾರವನ್ನು ಆಂಧ್ರ ಪ್ರದೇಶದ ಜಗನ್ ಮೋಹನ್ ರೆಡ್ಡಿ ನೇತೃತ್ವದ ಸರ್ಕಾರ ಕೈಗೊಂಡಿದೆ.
ಅಲ್ಲದೇ ಸಾಮಾನ್ಯ ಮತ್ತು ಮೀಸಲು ವಿಭಾಗದಲ್ಲಿ ದೇವಾಲಯದ ಆಡಳಿತ ಮಂಡಳಿಯ ಶೇ.50ರಷ್ಟುಹುದ್ದೆಗಳನ್ನು ಮಹಿಳೆಯರಿಗೆ ಮೀಸಲಿಡುವುದನ್ನು ಸರ್ಕಾರ ಕಡ್ಡಾಯಗೊಳಿಸಿದೆ. ಅಂದರೆ, ತಿರುಮಲ ತಿರುಪತಿ ದೇವಾಸ್ಥಾನಂನ 25 ನಾಮನಿರ್ದೇಶಿತ ಸದಸ್ಯರ ಪೈಕಿ ಪರಿಶಿಷ್ಟಜಾತಿ ಹಾಗೂ ಹಿಂದುಳಿದ ವರ್ಗದವರು ಸೇರಿದಂತೆ 13 ಮಹಿಳೆಯರು ಸ್ಥಾನ ಪಡೆಯಲಿದ್ದಾರೆ.
ಆಂಧ್ರ ಪ್ರದೇಶದ ದತ್ತಿ ಹಾಗೂ ಹಿಂದೂ ಧಾರ್ಮಿಕ ಸಂಸ್ಥೆಗಳ ಕಾಯ್ದೆ- 1987ರ ಅಡಿಯಲ್ಲಿ ಮುಜರಾಯಿ ಇಲಾಖೆಯ ವಿಶೇಷ ಮುಖ್ಯ ಕಾರ್ಯದರ್ಶಿ ಈ ಆದೇಶ ಹೊರಡಿಸಿದ್ದಾರೆ. ಲಿಂಗ ಹಾಗೂ ಸಮುದಾಯ ಆಧಾರಿತ ಮೀಸಲನ್ನು ಆಂಧ್ರ ಪ್ರದೇಶದಲ್ಲಿ ಜಾರಿ ಮಾಡುತ್ತಿರುವುದು ಇದೇ ಮೊದಲು. ಸರ್ಕಾರದ ಈ ನಿರ್ಧಾರದಿಂದಾಗಿ ಮುಜರಾಯಿ ಇಲಾಖೆಯ ದೇವಾಲಯಗಳಲ್ಲಿ ದಲಿತರು ಸೇರಿದಂತೆ ಬ್ರಾಹ್ಮಣರೇತರರು ಸಹ ದೇವಸ್ಥಾನದ ಉನ್ನತ ಹುದ್ದೆಗೆ ಏರುವ ಅವಕಾಶ ಕಲ್ಪಿಸಿದಂತಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.