ಮಾಜಿ ಸಿಎಂ ನಾಯ್ಡು ಮನೆ ಧ್ವಂಸಕ್ಕೆ ಆಂಧ್ರ ಸರ್ಕಾರದಿಂದ ಮತ್ತೊಂದು ನೋಟಿಸ್‌!

Published : Sep 22, 2019, 09:24 AM IST
ಮಾಜಿ ಸಿಎಂ ನಾಯ್ಡು ಮನೆ ಧ್ವಂಸಕ್ಕೆ ಆಂಧ್ರ ಸರ್ಕಾರದಿಂದ ಮತ್ತೊಂದು ನೋಟಿಸ್‌!

ಸಾರಾಂಶ

ಆಂಧ್ರ ಮಾಜಿ ಸಿಎಂ ನಾಯ್ಡು ಮನೆ ಧ್ವಂಸಕ್ಕೆ ಸರ್ಕಾರದಿಂದ ಮತ್ತೊಂದು ನೋಟಿಸ್‌ ಜಾರಿ| ಉಂಡವಳ್ಳಿ ಗ್ರಾಮದಲ್ಲಿರುವ ನಾಯ್ಡು ನಿವಾಸದ ಗೋಡೆಗೆ ಅಂಟಿಸಿದ ಅಧಿಕಾರಿಗಳು

ಅಮರಾವತಿ[ಸೆ.22]: ನಿಯಮಬಾಹಿರವಾಗಿ ಕೃಷ್ಣಾ ನದಿ ತೀರದಲ್ಲಿ ನಿರ್ಮಿಸಲಾಗಿರುವ ಆಂಧ್ರಪ್ರದೇಶ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ನಿವಾಸ ಧ್ವಂಸಕ್ಕೆ ನಿರ್ಧರಿಸಲಾಗಿದ್ದು, 7 ದಿನಗಳ ಒಳಗಾಗಿ ಮನೆ ಖಾಲಿ ಮಾಡುವಂತೆ ಸೂಚಿಸಿ ಜಗನ್‌ ಸರ್ಕಾರ ಮತ್ತೊಮ್ಮೆ ನೋಟಿಸ್‌ ನೀಡಿದೆ.

ಈ ಬಗ್ಗೆ ಆಂಧ್ರಪ್ರದೇಶ ರಾಜಧಾನಿ ಪ್ರಾಂತ್ಯದ ಅಭಿವೃದ್ಧಿ ಪ್ರಾಧಿಕಾರ ನಾಯ್ಡು ನಿವಾಸದ ಮಾಲೀಕ ಲಿಂಗಮನೇನಿ ರಮೇಶ್‌ಗೆ ನೋಟಿಸ್‌ ನೀಡಿದೆ. ನಾಯ್ಡು ನಿವಾಸದಲ್ಲಿ ಯಾರೂ ಇಲ್ಲದ ಕಾರಣ ಈ ಕುರಿತಾದ ಆಯುಕ್ತರ ನೋಟಿಸ್‌ ಅನ್ನು ಉಂಡವಳ್ಳಿ ಗ್ರಾಮದಲ್ಲಿರುವ ನಾಯ್ಡು ನಿವಾಸದ ಗೋಡೆ ಮೇಲೆ ಅಂಟಿಸಲಾಗಿದೆ.

ಜೂ.27ರಂದು ಈ ಕುರಿತು ಎಪಿಸಿಆರ್‌ಡಿ ಶೋಕಾಸ್‌ ನೋಟಿಸ್‌ ರವಾನಿಸಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Breaking News: ಬೆಳಗಾವಿಯಲ್ಲಿ ಬಿಜೆಪಿ ಹೈವೋಲ್ಟೇಜ್ ಸಭೆ; ಬಿಎಲ್ ಸಂತೋಷ್, ವಿಜಯೇಂದ್ರ ನೇತೃತ್ವದಲ್ಲಿ ಚುನಾವಣಾ ತಂತ್ರ!
ಬೀಚ್‌ನಲ್ಲಿ ಹೊಸ ವರ್ಷ ಆಚರಿಸುವವರಿಗೆ ವಾರ್ನಿಂಗ್, ಡಿ.31ರ ಸಂಜೆ 6ರ ಬಳಿಕ ಸಮುದ್ರಕ್ಕಿಳಿಯುವಂತಿಲ್ಲ