2019ರಲ್ಲಿ 1996ರ ರಾಜಕೀಯ ಮರುಕಳಿಸುತ್ತಾ? ಅಂದೇನಾಗಿತ್ತು? ಎಚ್‌ಡಿಕೆ ಹಿಂಗ್ಯಾಕಂದ್ರು?

By Web DeskFirst Published Nov 8, 2018, 7:59 PM IST
Highlights

ಮುಂದಿನ ಲೋಕಸಭಾ ಚುನಾವಣೆಯನ್ನು ಒಟ್ಟಾಗಿ ಎದುರಿಸುವ ನಿಟ್ಟಿನಲ್ಲಿ ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಇಂದು ಸಿಎಂ ಕುಮಾರಸ್ವಾಮಿ ಅವರನ್ನ ಭೇಟಿ ಮಾಡಿದ್ರು. ಹೀಗೆ ಬಗ್ಗೆ ಕುಮಾರಸ್ವಾಮಿ ಏನು ಹೇಳಿದ್ರು? ನೋಡಿ

ಬೆಂಗಳೂರು, [ನ.08]: ಮುಂದಿನ ಲೋಕಸಭಾ ಚುನಾವಣೆಯನ್ನು ಒಟ್ಟಾಗಿ ಎದುರಿಸುವ ನಿಟ್ಟಿನಲ್ಲಿ ಆಂಧ್ರ ಪ್ರದೇಶ ಮುಖ್ಯಮಂತ್ರಿ ಎಲ್ಲ ಜಾತ್ಯತೀತ ಪಕ್ಷಗಳ ನಾಯಕರನ್ನೂ ಭೇಟಿ ಮಾಡಿ ಮಾತುಕತೆ ನಡೆಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಎಚ್​. ಡಿ.ಕುಮಾರಸ್ವಾಮಿ ಹೇಳಿದರು.

ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಭೇಟಿಯ ನಂತರ ಇಂದು [ಗುರುವಾರ] ಸುದ್ದಿಗಾರರೊಂದಿಗೆ ಮಾತನಾಡಿ ಎಚ್ ಡಿಕೆ, 1996ರಲ್ಲಿ ದೇವೇಗೌಡರು ಪ್ರಧಾನಿಯಾಗಿದ್ದಾಗಿನ ಕಾಲ 2019ರ ಲೋಕಸಭಾ ಚುನಾವಣೆಯಲ್ಲಿ ಮರುಕಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪ್ರಜಾಪ್ರಭುತ್ವ ಉಳಿವಿಗಾಗಿ ನಾವೆಲ್ಲ ಒಂದಾಗಿ, ಮಹಾಘಟಬಂಧನ ನಡೆಸುತ್ತಿದ್ದೇವೆ. ದೇವೆಗೌಡರ ಹಿರಿತನ, ರಾಜಕೀಯ ಅನುಭವ, ಅವರಿಗೆ ಇರುವ ಹಿನ್ನೆಲೆಯನ್ನು ಗುರುತಿಸಿ ಈ ಒಗ್ಗಟ್ಟಿನ ನೇತೃತ್ವ ವಹಿಸಲು ಚಂದ್ರಬಾಬು ನಾಯ್ಡು ಕೇಳಿಕೊಂಡಿದ್ದಾರೆ. 

ರಾಷ್ಟ್ರದ ಪ್ರಾದೇಶಿಕ ಪಕ್ಷಗಳನ್ನು ಒಗ್ಗೂಡಿಸುವ ಶಕ್ತಿ ದೇವೇಗೌಡರಿಗೆ ಇದೆ. ನಾಯ್ಡು ಅವರು ಈಗಾಗಲೇ ರಾಹುಲ್​ ಗಾಂಧಿಯವರನ್ನೂ ಭೇಟಿ ಮಾಡಿದ್ದರು. ಜನವರಿಯಲ್ಲಿ ಮಮತಾ ಬ್ಯಾನರ್ಜಿಯವರು ಕೋಲ್ಕತಾದಲ್ಲಿ ಒಂದು ವೇದಿಕೆ ಸಿದ್ಧಪಡಿಸಿದ್ದು ಎಲ್ಲರಿಗೂ ಆಹ್ವಾನ ನೀಡಿದ್ದಾರೆ. ನಾವೆಲ್ಲ ಒಂದಾಗಿದ್ದೇವೆ ಎಂದರು.

click me!