
ಅಮರಾವತಿ[ಡಿ.30]: ಕಳೆದ 10 ವರ್ಷಗಳಲ್ಲಿ ರಾಜ್ಯದ ಜನಸಂಖ್ಯೆ ಶೇ.1.6ರಷ್ಟುಪ್ರಮಾಣ ಇಳಿಕೆಯಾಗಿರುವುದಕ್ಕೆ ಆತಂಕಕ್ಕೀಡಾಗಿರುವ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಅವರು ‘ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೆರುವ ಪೋಷಕರಿಗೆ ಪ್ರೋತ್ಸಾಹ ಧನ’ ನೀಡಲು ಮುಂದಾಗಿದ್ದಾರೆ. ರಾಜ್ಯದಲ್ಲಿ ಯುವಕರ ಸಂಖ್ಯೆಯನ್ನು ಹೆಚ್ಚುಗೊಳಿಸಲು ಈ ಕ್ರಮಕ್ಕೆ ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಅಲ್ಲದೆ, 2ಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರಗೆ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಸ್ಪರ್ಧೆಗೆ ನಿಷೇಧ ಇರುವ ನಿಯಮವನ್ನು ರದ್ದು ಮಾಡುವುದಾಗಿಯೂ ಅವರು ಘೋಷಿಸಿದ್ದಾರೆ.
ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಗಳಿಗೆ ಅನುದಾನ ಸಿಗುವುದಕ್ಕೆ ಜನಸಂಖ್ಯೆಯೇ ಮಾನದಂಡ. ಹೀಗಾಗಿ, 15ನೇ ಹಣಕಾಸು ಆಯೋಗದಲ್ಲಿ ಕಡಿಮೆ ಜನಸಂಖ್ಯೆ ಇರುವ ಕಾರಣಕ್ಕೆ ಹೆಚ್ಚಿನ ಲಾಭಾಂಶ ದೊರೆಯದ ಹಿನ್ನೆಲೆಯಲ್ಲಿ ಚಂದ್ರಬಾಬು ನಾಯ್ಡು ಅವರು ಈ ಕ್ರಮ ಕೈಗೊಂಡಿರಬಹುದು ಎನ್ನಲಾಗಿದೆ.
ಈ ಬಗ್ಗೆ ಇತ್ತೀಚೆಗೆ ಮಾತನಾಡಿದ ಸಿಎಂ ಚಂದ್ರಬಾಬು ನಾಯ್ಡು ಅವರು, ‘ಕಳೆದ 10 ವರ್ಷಗಳಲ್ಲಿ ರಾಜ್ಯದ ಜನಸಂಖ್ಯೆ ಶೇ.1.6ರಷ್ಟುಇಳಿಕೆಯಾಗಿದೆ. ಜನಸಂಖ್ಯಾ ಅಸಮಾತೋಲನವನ್ನು ಸರಿಪಡಿಸುವುದಕ್ಕೆ ಇದು ಸುಸಂದರ್ಭವಾಗಿದೆ. ಇಲ್ಲದಿದ್ದರೆ, ಮುಂದಿನ ಎರಡು ದಶಕಗಳಲ್ಲಿ ದುಡಿಯುವವರ ಸಂಖ್ಯೆ ಇಳಿಮುಖವಾಗಿ, ಕುಳಿತು ತಿನ್ನುವವರ(ವಯೋವೃದ್ಧರು) ಸಂಖ್ಯೆ ಹೆಚ್ಚುವ ಭೀತಿಯಿದೆ’ ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ