ಮತ್ತೆ ಸರ್ಕಾರದ ವಿರುದ್ಧ ಬೀದಿಗಿಳಿದ ಅಂಗನವಾಡಿ ಕಾರ್ಯಕರ್ತೆಯರು

Published : Dec 05, 2017, 01:40 PM ISTUpdated : Apr 11, 2018, 12:54 PM IST
ಮತ್ತೆ ಸರ್ಕಾರದ ವಿರುದ್ಧ ಬೀದಿಗಿಳಿದ ಅಂಗನವಾಡಿ ಕಾರ್ಯಕರ್ತೆಯರು

ಸಾರಾಂಶ

ಮತ್ತೆ ಅಂಗನವಾಡಿ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ  ಬೀದಿಗಿಳಿದಿದ್ದಾರೆ.   ರಾಜ್ಯ ಸರ್ಕಾರದ  ಮಾತೃಪೂರ್ಣ ಯೋಜನೆ ಸಂಪೂರ್ಣವಾಗಿ ವಿಫಲವಾಗಿದೆ.  ಈ ಹಿನ್ನೆಲೆಯಲ್ಲಿ  ಮಾತೃ ಪೂರ್ಣ ಯೋಜನೆಗೆ ಪೂರೈಕೆ ಆಗುವ ಆಹಾರವನ್ನು ಬಾಣಂತಿಯರ ಮನೆಗೆ ಪೂರೈಸುವಂತೆ ಅಂಗನವಾಡಿ ಕಾರ್ಯಕರ್ತರು ಒತ್ತಾಯಿಸಿದ್ದಾರೆ.  ಕನಿಷ್ಠ 18 ಸಾವಿರ ವೇತನ ಆಗ್ರಹ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ   ಫ್ರೀಡಂ ಪಾರ್ಕ್'ನಲ್ಲಿ ಸಾವಿರಾರು ಪ್ರತಿಭಟನೆಕಾರರು ಜಮಾಯಿಸಿದ್ದಾರೆ.

ಬೆಂಗಳೂರು (ಡಿ.05): ಮತ್ತೆ ಅಂಗನವಾಡಿ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ  ಬೀದಿಗಿಳಿದಿದ್ದಾರೆ.   ರಾಜ್ಯ ಸರ್ಕಾರದ  ಮಾತೃಪೂರ್ಣ ಯೋಜನೆ ಸಂಪೂರ್ಣವಾಗಿ ವಿಫಲವಾಗಿದೆ.  ಈ ಹಿನ್ನೆಲೆಯಲ್ಲಿ  ಮಾತೃ ಪೂರ್ಣ ಯೋಜನೆಗೆ ಪೂರೈಕೆ ಆಗುವ ಆಹಾರವನ್ನು ಬಾಣಂತಿಯರ ಮನೆಗೆ ಪೂರೈಸುವಂತೆ ಅಂಗನವಾಡಿ ಕಾರ್ಯಕರ್ತರು ಒತ್ತಾಯಿಸಿದ್ದಾರೆ.  ಕನಿಷ್ಠ 18 ಸಾವಿರ ವೇತನ ಆಗ್ರಹ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ   ಫ್ರೀಡಂ ಪಾರ್ಕ್'ನಲ್ಲಿ ಸಾವಿರಾರು ಪ್ರತಿಭಟನೆಕಾರರು ಜಮಾಯಿಸಿದ್ದಾರೆ.

ಬೇರೆ ಬೇರೆ ಜಿಲ್ಲೆಗಳಿಂದ ಸುಮಾರು ಐದು  ಸಾವಿರಕ್ಕೂ ಹೆಚ್ಚು  ಕಾರ್ಯಕರ್ತೆಯರು ಬೆಂಗಳೂರಿಗೆ ಬಂದಿಳಿದಿದ್ದು ರೈಲ್ವೇ ನಿಲ್ದಾಣದಿಂದ ಫ್ರೀಡಂ ಪಾರ್ಕ್'ವರೆಗೆ ಬೃಹತ್ ರ್ಯಾಲಿ ನಡೆಸುತ್ತಿದ್ದಾರೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ನಾಗರತ್ನಮ್ಮ ಗೆ ಪ್ರತಿಭಟನಾಕಾರರು ಮನವಿ ಸಲ್ಲಿಸಿದ್ದಾರೆ.  ಮನವಿ ಸ್ವೀಕರಿಸಿ ಮಾತನಾಡಿದ ಜಂಟಿ ನಿರ್ದೇಶಕಿ ನಾಗರತ್ನಮ್ಮ,   ಮಾತೃ ಪೂರ್ಣ ಅತ್ಯಂತ ಮಹತ್ವ ಯೋಜನೆ.  ಇದಕ್ಕೆ ಸಾಕಷ್ಟು ತೊಂದರೆ ಇದೆ ಎಂದು ಮನವಿ ಕೊಟ್ಟಿದ್ದಾರೆ.  ಸರ್ಕಾರ ಮಟ್ಟದಲ್ಲಿ ಚರ್ಚೆ ಮಾಡಿದ ನಂತರ ತೀರ್ಮಾನ ಕೈಗೊಳ್ಳುತ್ತೇವೆ ಎಂದಿದ್ದಾರೆ.

ಅಂಗನವಾಡಿ ಕಾರ್ಯಕರ್ತೆಯರು  ಡಿ. 17 ರವರೆಗೆ ಗಡುವು ನೀಡಿದ್ದು, ಬೇಡಿಕೆ ಪೂರೈಸದಿದ್ದರೆ ಮತ್ತೆ ಪ್ರತಿಭಟನೆ ಮಾಡುವ ಎಚ್ಚರಿಕೆ ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಾಲೀಕನ ನಿಧನಕ್ಕೆ ಬಿಕ್ಕಿ ಬಿಕ್ಕಿ ಕಣ್ಣೀರು ಹಾಕಿದ ಶ್ವಾನ; ವಿಡಿಯೋ ನೋಡಿ ಭಾವುಕರಾದ ಜನರು
ವಿದೇಶದಲ್ಲಿ ಇರುವವರಿಗೂ ಗ್ಯಾರಂಟಿ ಲಾಭ ಬಗ್ಗೆ ಸಿಎಲ್ಪೀಲಿ ಪ್ರಸ್ತಾಪ: ಸಚಿವ ಮಧು ಬಂಗಾರಪ್ಪ