
ಚಾಮರಾಜನಗರ (ನ.21): ಅಂಗನವಾಡಿ ಸಹಾಯಕಿಯಿಂದ ಅಮಾನವೀಯ ಕೃತ್ಯ ನಡೆದಿದೆ. ದಲಿತ ಬಾಲಕ ಸವರ್ಣಿಯರ ಅಂಗನವಾಡಿಗೆ ಹೋಗಿದ್ದಕ್ಕೆ ಬಾಲಕನ ಮೇಲೆ ಬಿಸಿ ಸೌಟಿನಿಂದ ಹಲ್ಲೆ ಮಾಡಿದ್ದಾರೆ.
ಮೂರೂವರೆ ವರ್ಷದ ಬಾಲಕ ಹಾರ್ದಿಕ್ ಗುತ್ತಿಗೆಗೆ ಅಂಗನವಾಡಿ ಸಹಾಯಕಿ ಶಿವಮಲ್ಲಮ್ಮ ಬಿಸಿ ಸೌಟಿನಿಂದ ಹೊಡೆದಿದ್ದು ಗಂಭೀರ ಗಾಯಗೊಂಡಿದ್ದಾನೆ.
ಚಾಮರಾಜನಗರ ತಾಲೂಕಿನ ಕೊಡಿಮೋಳೆ ಬಸವಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ನಿನ್ನೆ ಅಂಗನವಾಡಿ ಅಂಗಳದಲ್ಲಿ ಆಡವಾಡುತ್ತಿದ್ದ ಬಾಲಕ ಹಾರ್ದಿಕ್ ಪಕ್ಕದ ಅಂಗನವಾಡಿಗೆ ಹೋಗಿದ್ದ. ಇದರಿಂದ ಸಿಟ್ಟಿಗೆದ್ದ ಶಿವಮಲ್ಲಮ್ಮ, ಬಿಸಿ ಸೌಟಿನಿಂದ ಹಾರ್ದಿಕ್ ಮೇಲೆ ಹಲ್ಲೆ ನಡೆಸಿದ್ದಾರೆ. ಆಕ್ರೋಶಗೊಂಡ ಹಾರ್ದಿಕ್ ಪೋಷಕರು ಗಂಭೀರ ಆರೋಪ ಮಾಡಿದ್ದಾರೆ. ರಾಮಸಮುದ್ರ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.