ಕರಾವಳಿ ಉತ್ಸವ ಉದ್ಘಾಟನೆಗೆ ಪ್ರಕಾಶ್ ರೈ; ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ

Published : Dec 22, 2017, 01:21 PM ISTUpdated : Apr 11, 2018, 12:56 PM IST
ಕರಾವಳಿ ಉತ್ಸವ ಉದ್ಘಾಟನೆಗೆ ಪ್ರಕಾಶ್ ರೈ; ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ

ಸಾರಾಂಶ

ಮಂಗಳೂರಿನಲ್ಲಿ ಇಂದಿನಿಂದ ಎರಡು ದಿನ ಕರಾವಳಿ ಉತ್ಸವ ನಡೆಯಲಿದೆ. ನಟ ಪ್ರಕಾಶ್ ರೈ ಇದರ ಉದ್ಘಾಟನೆ ಮಾಡುತ್ತಿರುವುದಕ್ಕೆ ಸಾಮಾಜಿಕ ತಾಣಗಳಲ್ಲಿ ಒಂದು ವರ್ಗದಿಂದ ಭಾರೀ ವಿರೋಧ ವ್ಯಕ್ತವಾಗಿದೆ.

ಮಂಗಳೂರು: ಮಂಗಳೂರಿನಲ್ಲಿ ಇಂದಿನಿಂದ ಎರಡು ದಿನ ಕರಾವಳಿ ಉತ್ಸವ ನಡೆಯಲಿದೆ. ನಟ ಪ್ರಕಾಶ್ ರೈ ಇದರ ಉದ್ಘಾಟನೆ ಮಾಡುತ್ತಿರುವುದಕ್ಕೆ ಸಾಮಾಜಿಕ ತಾಣಗಳಲ್ಲಿ ಒಂದು ವರ್ಗದಿಂದ ಭಾರೀ ವಿರೋಧ ವ್ಯಕ್ತವಾಗಿದೆ.

ಸರ್ಕಾರದಿಂದ ನಡೆಯುವ ಕಾರ್ಯಕ್ರಮದ ಉದ್ಘಾಟನೆಗೆ ಪ್ರಕಾಶ್ ರೈ ಆಗಮಿಸುತ್ತಿರುವುದರ ಬಗ್ಗೆ ಹಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಫೇಸ್’ಬುಕ್ ಮತ್ತು ವಾಟ್ಸ್​ಪ್​’ಗಳಲ್ಲಿ  ಪ್ರಕಾಶ್​ ರೈ ಫೋಟೋ ಪೋಸ್ಟ್​ ಮಾಡಿ, ಅವಾಚ್ಯ ಶಬ್ದಗಳಿಂದ ಕಮೆಂಟ್​ ಮಾಡಿದ್ದಾರೆ. 

ನಗರದ ಮಂಗಳಾ ಕ್ರೀಡಾಂಗಣ, ಕದ್ರಿ ಪಾರ್ಕ್ ಮತ್ತು ಬೀಚ್ ಗಳಲ್ಲಿ ಉತ್ಸವಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಮಧ್ಯಾಹ್ನ 3 ಗಂಟೆಗೆ ಉತ್ಸವದ ಮೆರವಣಿಗೆಗೆ ಆಹಾರ ಸಚಿವ ಖಾದರ್ ಚಾಲನೆ ನೀಡಿ, ವಸ್ತು ಪ್ರದರ್ಶನಕ್ಕೆ ಸಚಿವ ರಮಾನಾಥ್ ರೈ ಚಾಲನೆ ನೀಡಿದ ಬಳಿಕ ಸಂಜೆ 6ಕ್ಕೆ ಪ್ರಕಾಶ್ ರೈ ಕರಾವಳಿ ಉತ್ಸವ ಉದ್ಘಾಟಿಸಲಿದ್ದಾರೆ.

ಆದರೆ ಇದೀಗ ಸಾಮಾಜಿಕ ತಾಣಗಳಲ್ಲಿ ಈ ಬಗ್ಗೆ ವಿರೋಧ ವ್ಯಕ್ತವಾಗಿದ್ದು, ಹಿಂದೂ ಧರ್ಮದ ವಿರುದ್ಧ ಹೇಳಿಕೆ ನೀಡುವ ಪ್ರಕಾಶ ರೈ ಸರ್ಕಾರದ ಕಾರ್ಯಕ್ರಮ ಉದ್ಘಾಟಿಸಬಾರದು ಎಂದು ಕೆಲವರು ಆಕ್ಷೇಪ ಎತ್ತಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

UIDAI Rules: ಯಾವುದೇ ಹೋಟೆಲ್‌ನಲ್ಲಿ ಆಧಾರ್ ಕಾರ್ಡ್ ಫೋಟೋಕಾಪಿ ನೀಡೋ ಅಗತ್ಯವಿಲ್ಲ: ಈ ಹೊಸ ನಿಯಮ ತಿಳ್ಕೊಳ್ಳಿ
ತಾಯಿಯ ಜಾತಿ ಆಧಾರದಲ್ಲೇ ಮಗಳಿಗೆ ಜಾತಿ ಪ್ರಮಾಣಪತ್ರ: ಸುಪ್ರೀಂ ಮಹತ್ವದ ತೀರ್ಪು