ಕಾಂಗ್ರೆಸ್‌ ವಿರುದ್ಧದ 5000 ಕೋಟಿ ಕೇಸ್‌ ವಾಪಸ್‌: ಅಂಬಾನಿ

Published : May 22, 2019, 08:52 AM ISTUpdated : May 22, 2019, 11:08 AM IST
ಕಾಂಗ್ರೆಸ್‌ ವಿರುದ್ಧದ 5000 ಕೋಟಿ ಕೇಸ್‌ ವಾಪಸ್‌: ಅಂಬಾನಿ

ಸಾರಾಂಶ

ರಫೇಲ್‌ ಯುದ್ಧ ವಿಮಾನ ಖರೀದಿ ವಿಚಾರಕ್ಕೆ ಸಂಬಂಧಿಸಿದಂತೆ ವಿವಾದಾತ್ಮಕ ಲೇಖನ| ಕಾಂಗ್ರೆಸ್‌ ವಿರುದ್ಧದ 5000 ಕೋಟಿ ಕೇಸ್‌ ವಾಪಸ್‌ಗೆ ಅಂಬಾನಿ ನಿರ್ಧಾರ|   

ಅಹಮದಾಬಾದ್‌[ಮೇ.22]: ರಫೇಲ್‌ ಯುದ್ಧ ವಿಮಾನ ಖರೀದಿ ವಿಚಾರಕ್ಕೆ ಸಂಬಂಧಿಸಿದಂತೆ ವಿವಾದಾತ್ಮಕ ಲೇಖನ ಪ್ರಕಟಿಸಿದ್ದಕ್ಕೆ ನ್ಯಾಷನಲ್‌ ಹೆರಾಲ್ಡ್‌ ಪತ್ರಿಕೆ ಹಾಗೂ ಕಾಂಗ್ರೆಸ್‌ ನಾಯಕರ ವಿರುದ್ಧ ದಾಖಲಿಸಲಾಗಿದ್ದ 5000 ಕೋಟಿ ರು. ಮಾನನಷ್ಟಮೊಕದ್ದಮೆ ವಾಪಸ್‌ ಪಡೆಯಲು ರಿಲಯನ್ಸ್‌ ಗ್ರೂಪ್‌ನ ಮುಖ್ಯಸ್ಥ ಅನಿಲ್‌ ಅಂಬಾನಿ ಅವರು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಮಂಗಳವಾರ ಮಾತನಾಡಿದ ಅನಿಲ್‌ ಅಂಬಾನಿ ಪರ ವಕೀಲ ರಸೇಶ್‌ ಪಾರೀಖ್‌ ಅವರು, ‘ಕಾಂಗ್ರೆಸ್‌ ನಾಯಕರು ಹಾಗೂ ನ್ಯಾಷನಲ್‌ ಹೆರಾಲ್ಡ್‌ ಪತ್ರಿಕೆ ವಿರುದ್ಧ ದಾಖಲಿಸಿರುವ ಮಾನನಷ್ಟಮೊಕದ್ದಮೆ ಪ್ರಕರಣವನ್ನು ವಾಪಸ್‌ ಪಡೆಯುತ್ತಿದ್ದೇವೆ ಎಂಬುದನ್ನು ಅವರಿಗೆ ತಿಳಿಸಿದ್ದೇವೆ,’ ಎಂದು ಹೇಳಿದ್ದಾರೆ. ಕೋರ್ಟ್‌ನ ಬೇಸಿಗೆ ರಜಾ ಅವಧಿ ಮುಕ್ತಾಯವಾದ ಬಳಿಕ ನಡೆಯುವ ವಿಚಾರಣೆ ವೇಳೆ ಈ ಮಾನನಷ್ಟಮೊಕದ್ದಮೆಯನ್ನು ಹಿಂಪಡೆಯುವ ಪ್ರಕ್ರಿಯೆಗಳು ನಡೆಯಲಿವೆ ಎಂದು ಕಾಂಗ್ರೆಸ್‌ ನಾಯಕರ ಪರ ವಕೀಲ ಪಿ.ಎಸ್‌. ಚಂಪನೇರಿ ಹೇಳಿದ್ದಾರೆ.

ಈ ಹಿಂದೆ ವಿವಾದಾತ್ಮಕ ವರದಿ ಪ್ರಸಾರ ಮಾಡಿದ್ದಕ್ಕೆ ನ್ಯಾಷನಲ್‌ ಹೆರಾಲ್ಡ್‌ ಪತ್ರಿಕೆ ಸೇರಿ ಇತರ ಪತ್ರಿಕೆಗಳು, ಕೆಲವು ಪತ್ರಕರ್ತರು ಮತ್ತು ಕಾಂಗ್ರೆಸ್‌ ನಾಯಕರಾದ ರಣದೀಪ್‌ ಸುರ್ಜೇವಾಲಾ, ಸುನಿಲ್‌ ಜಖಾರ್‌, ಊಮ್ಮನ್‌ ಚಾಂಡಿ, ಅಶೋಕ್‌ ಚವಾಣ್‌, ಅಭಿಷೇಕ್‌ ಮನು ಸಿಂಘ್ವಿ, ಸಂಜಯ್‌ ನಿರುಪಮ್‌ ಹಾಗೂ ಶಕ್ತಿಸಿಂಹ ಗೋಯಿಲ್‌ ವಿರುದ್ಧ ಅನಿಲ್‌ ಅಂಬಾನಿ ಒಡೆತನದ ರಿಲಯನ್ಸ್‌ ಡಿಫೆನ್ಸ್‌, ರಿಲಯನ್ಸ್‌ ಇನ್‌ಫ್ರಾಸ್ಟ್ರಕ್ಚರ್‌ ಅಂಡ್‌ ರಿಲಯನ್ಸ್‌ ಏರೋಸ್ಟ್ರಕ್ಚರ್‌ ಮಾನನಷ್ಟಮೊಕದ್ದಮೆ ದಾಖಲಿಸಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನಿರ್ಮಲಾ ಸೀತಾರಾಮನ್ ಭಾರತದ ನಂ.1 ಪ್ರಭಾವಿ ಮಹಿಳೆ: ವಿಶ್ವದ ಪ್ರಭಾವಿಗಳಲ್ಲಿ ಭಾರತದ ಮೂವರಿಗೆ ಸ್ಥಾನ
ಟಿವಿ ಪತ್ರಿಕೋದ್ಯಮದಲ್ಲಿ ಮೇಲುಗೈ.. ‘ಏಷ್ಯಾನೆಟ್ ಸುವರ್ಣ ನ್ಯೂಸ್‌’ಗೆ 8 ಎನ್ಬಾ ಪ್ರಶಸ್ತಿ