ಮಾಸ್ತಿಗುಡಿ ದುರಂತ: ಅನಿಲ್ ಶವವೂ ಪತ್ತೆ

Published : Nov 10, 2016, 02:26 AM ISTUpdated : Apr 11, 2018, 01:09 PM IST
ಮಾಸ್ತಿಗುಡಿ ದುರಂತ: ಅನಿಲ್ ಶವವೂ ಪತ್ತೆ

ಸಾರಾಂಶ

ಜಲಾಶಯದ ಗಿಡಗಂಟಿಗಳಲ್ಲಿ ಸಿಕ್ಕಿಕೊಂಡಿದ್ದ ಅನಿಲ್ ಮೃತ ದೇಹವನ್ನು ಇಂದು ಬೆಳಗ್ಗೆ 5:55ರ ಮುಂಜಾವಿನಲ್ಲಿ ಹೊರತೆಗೆಯಲಾಯಿತು.

ಬೆಂಗಳೂರು(ನ. 10): ತಿಪ್ಪಗೊಂಡನಹಳ್ಳಿ ಜಲಾಶಯದಲ್ಲಿ ನಟ ರಾಘವ ಉದಯ್ ಬಳಿಕ ಈಗ ಮತ್ತೊಬ್ಬ ಮೃತ ನಟ ಅನಿಲ್ ಶವವೂ ಸಿಕ್ಕಿದೆ. 72 ಗಂಟೆಗಳ ಕಾರ್ಯಾಚರಣೆ ಬಳಿಕ ಅನಿಲ್ ಶವ ಪತ್ತೆಯಾಗಿದೆ. ಜಲಾಶಯದ ಗಿಡಗಂಟಿಗಳಲ್ಲಿ ಸಿಕ್ಕಿಕೊಂಡಿದ್ದ ಅನಿಲ್ ಮೃತ ದೇಹವನ್ನು ಇಂದು ಬೆಳಗ್ಗೆ 5:55ರ ಮುಂಜಾವಿನಲ್ಲಿ ಹೊರತೆಗೆಯಲಾಯಿತು. ಪಣಂಬೂರಿನ ನುರಿತ ಮುಳುಗು ತಜ್ಞರ ತಂಡ, ಎನ್'ಡಿಆರ್'ಎಫ್, ಎಸ್'ಡಿಆರ್'ಎಫ್, ಅಗ್ನಿಶಾಮಕ ಸಿಬ್ಬಂದಿ ಅನಿಲ್ ಮೃತದೇಹದ ಶೋಧಕ್ಕಾಗಿ ಜಂಟಿ ಕಾರ್ಯಾಚರಣೆ ನಡೆಸಿದ್ದವು.

ನಿನ್ನೆ ಮಧ್ಯಾಹ್ನ 3 ಗಂಟೆಗೆ ನಟ ರಾಘವ್ ಉದಯ್ ಅವರ ಮೃತದೇಹ ಪತ್ತೆಯಾಗಿತ್ತು. ತಿಪ್ಪಗೊಂಡನಹಳ್ಳಿ ಬಳಿಯೇ ವೈದ್ಯರ ತಂಡ ಆಗಮಿಸಿ ಪೋಸ್ಟ್ ಮಾರ್ಟಮ್ ನಡೆಸಿತ್ತು. ಇಂದು ಬೆಳಗ್ಗೆ ಉದಯ್ ಅಂತ್ಯಸಂಸ್ಕಾರ ನೆರವೇರಲಿದೆ.

ನವೆಂಬರ್ 7ರ ಮಧ್ಯಾಹ್ನದಂದು ಮಾಸ್ತಿಗುಡಿ ಸಿನಿಮಾದ ಕ್ಲೈಮ್ಯಾಕ್ಸ್ ದೃಶ್ಯಗಳ ಚಿತ್ರೀಕರಣ ವೇಳೆ ಹೆಲಿಕಾಪ್ಟರ್'ನಿಂದ ನೀರಿಗೆ ಹಾರುವ ಸ್ಟಂಟ್ ಮಾಡುವ ವೇಳೆ ರಾಘವ ಉದಯ್ ಮತ್ತು ಅನಿಲ್ ಕುಮಾರ್ ಸಾವನ್ನಪ್ಪಿದ್ದರು. ಅವರ ಜೊತೆ ನೀರಿಗೆ ಹಾರಿದ್ದ ನಾಯಕನಟ ದುನಿಯಾ ವಿಜಯ್ ಅದೃಷ್ಟವಶಾತ್ ಬಚಾವ್ ಆಗಿದ್ದರು. ಚಿತ್ರೀಕರಣಕ್ಕೆ ಬೇಕಾದ ಮುಂಜಾಗ್ರತಾ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಈ ದುರಂತ ಸಂಭವಿಸಿತ್ತು. ಅಲ್ಲದೇ, ಪೊಲೀಸ್ ಹಾಗೂ ಬಿಡಬ್ಲ್ಯೂಎಸ್'ಎಸ್'ಬಿ ಅನುಮತಿ ಇಲ್ಲದೆಯೇ ಚಿತ್ರೀಕರಣ ನಡೆಸಲಾಗಿತ್ತು. ಈ ಪ್ರಕರಣದಲ್ಲಿ ಸಾಹಸ ನಿರ್ದೇಶಕ ರವಿ ವರ್ಮಾ, ನಿರ್ಮಾಪಕ ಸುಂದರ್, ನಿರ್ದೇಶಕ ನಾಗಶೇಖರ್ ಹಾಗೂ ನಾಯಕ ನಟ ದುನಿಯಾ ವಿಜಯ್ ವಿರುದ್ಧ ದೂರು ದಾಖಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಧರ್ಮಸ್ಥಳ ಷಡ್ಯಂತ್ರ: ಬಯಲಾಯ್ತು 'ಬುರುಡೆ' ಗ್ಯಾಂಗ್ ರಹಸ್ಯ!
ವಸತಿ ಯೋಜನೆಗಳಿಗೆ ಸಹಾಯಧನ ಹೆಚ್ಚಳಕ್ಕೆ ಚಿಂತನೆ: ಸಚಿವ ಜಮೀರ್‌ ಅಹಮದ್‌