
ರಾಜ್ಯದ ಇತಿಹಾಸದಲ್ಲೇ ಶಾಸಕರಾಗಿ ಆಯ್ಕೆಯಾಗಿ ವಿಧಾನಸಭೆ ಪ್ರವೇಶಿಸಿದ ಮೊದಲ ದಂಪತಿ ಎಚ್.ಡಿ. ಕುಮಾರಸ್ವಾಮಿ ಹಾಗೂ ಅನಿತಾ ಕುಮಾರಸ್ವಾಮಿ.
2008ರ ವಿಧಾನಸಭೆ ಚುನಾವಣೆಯಲ್ಲಿ ಕುಮಾರಸ್ವಾಮಿ ಅವರು ರಾಮನಗರದಿಂದ ಆಯ್ಕೆಯಾಗಿದ್ದರು. ಮಧುಗಿರಿಯಲ್ಲಿ ಜೆಡಿಎಸ್ನಿಂದ ವಿಜೇತರಾಗಿದ್ದ ಗೌರಿಶಂಕರ್ ಅವರು ‘ಆಪರೇಷನ್ ಕಮಲ’ಕ್ಕೆ ತುತ್ತಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದರು. ಉಪಚುನಾವಣೆ ಘೋಷಣೆಯಾದಾಗ ಜೆಡಿಎಸ್ ಪಕ್ಷ ಅನಿತಾ ಅವರನ್ನು ಕಣಕ್ಕಿಳಿಸಿತ್ತು. ಜಯಭೇರಿ ಬಾರಿಸಿದ ಅವರು 2009ರ ಜನವರಿಯಲ್ಲಿ ಕುಮಾರಸ್ವಾಮಿ ಅವರ ಜತೆ ಬೆಳಗಾವಿ ವಿಧಾನಮಂಡಲ ಅಧಿವೇಶನದಲ್ಲಿ ವಿಧಾನಸಭೆ ಪ್ರವೇಶಿಸಿ ಇತಿಹಾಸ ಸೃಷ್ಟಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.