
ಬೆಂಗಳೂರು: ಚುನಾವಣೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷರಾಗಿರುವ ಕುಮಾರಸ್ವಾಮಿ ಅವರು ರಾಜ್ಯ ಪ್ರವಾಸದಲ್ಲಿ ಬ್ಯುಸಿಯಾಗಬೇಕಾಗುತ್ತದೆ.
ಒಂದು ವೇಳೆ, ಚನ್ನಪಟ್ಟಣದಿಂದ ಅನಿತಾ ಸ್ಪರ್ಧೆ ಮಾಡಿದರೆ, ಆ ಕ್ಷೇತ್ರದತ್ತ ಹೆಚ್ಚಿನ ಗಮನಹರಿಸಲು ಆಗುವುದಿಲ್ಲ. ಅನಿತಾ ಏನಾದರೂ ಪರಾಭವಗೊಂಡರೆ, ಪತ್ನಿಯನ್ನೇ ಗೆಲ್ಲಿಸಿಕೊಳ್ಳಲು ಆಗಲಿಲ್ಲ ಎಂಬ ಮುಜುಗರ ಅನುಭವಿಸಬೇಕಾಗುತ್ತದೆ ಎಂಬ ಕಾರಣಕ್ಕೆ ಅನಿತಾ ಕಣಕ್ಕಿಳಿಸಲು ಕುಮಾರಸ್ವಾಮಿ ಹಿಂದೇಟು ಹಾಕುತ್ತಿದ್ದಾರೆ ಎಂಬ ವಾದವಿದೆ.
ಜಾತಿ ಲೆಕ್ಕಾಚಾರ ಹೇಗಿದೆ ? : ಒಟ್ಟು 2,16,415 ಮತದಾರರು ಇದ್ದಾರೆ. ಒಕ್ಕಲಿಗರು 1,05,928, ಎಸ್ಸಿ/ಎಸ್ಟಿ39,359, ಮುಸ್ಲಿಮರು 25,491, ಲಿಂಗಾಯಿತರು 9585, ಕುರುಬರು 7236, ತಿಗಳರು 8332, ಬೆಸ್ತರು 9792 ಹಾಗೂ ಇತರೆ ಮತದಾರರು 10,692ದಷ್ಟಿದ್ದಾರೆ. ಒಕ್ಕಲಿಗ ಮತಗಳು ಇಬ್ಭಾಗವಾಗುವುದರಿಂದ ದಲಿತರು ಮತ್ತು ಅಲ್ಪಸಂಖ್ಯಾತರ ಮತಗಳೇ ಇಲ್ಲಿ ನಿರ್ಣಾಯಕವಾಗುತ್ತದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.