
ರಾಮನಗರ[ಸೆ.16]: ಅನರ್ಹ ಶಾಸಕರು ತ್ರಿಶಂಕು ಸ್ಥಿತಿಯಲ್ಲಿರುವುದನ್ನು ಎಲ್ಲರೂ ನೋಡುತ್ತಿದ್ದಾರೆ. ಹೀಗಿರುವಾಗ ಯಾವ ಶಾಸಕರು ತಾನೇ ಪಕ್ಷ ತೊರೆದು ರಾಜಕೀಯ ಭವಿಷ್ಯ ಹಾಳು ಮಾಡಿಕೊಳ್ಳಲು ಬಯಸುತ್ತಾರೆ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಪ್ರಶ್ನಿಸಿದರು.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಅತೃಪ್ತ ಶಾಸಕರ ಸ್ಥಿತಿ ನೋಡಿದ ಬಳಿಕ ಈಗಿರುವ ಶಾಸಕರು ಭವಿಷ್ಯ ಹಾಳು ಮಾಡಿಕೊಳ್ಳಲು ಸಿದ್ಧರಿಲ್ಲ. ಅಲ್ಲದೆ, ಬೇರೆ ಯಾರೂ ಪಕ್ಷ ಬಿಟ್ಟು ಹೋಗಲ್ಲ ಎಂದು ಹೇಳಿದರು.
ಮತ್ತೆ ಬಿಎಸ್ವೈ ಮನೆಗೆ ಹೆಜ್ಜೆ ಹಾಕಿದ ಜೆಡಿಎಸ್ ಶಾಸಕ ಜಿಟಿಡಿ!
ಮಾಜಿ ಸಚಿವ ಜಿ.ಟಿ. ದೇವೇಗೌಡರವರು ತಮ್ಮ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ವಿಚಾರವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದಾರೆ. ಅದರಲ್ಲಿ ತಪ್ಪೇನಿದೆ? ನಾನೂ ಕ್ಷೇತ್ರದ ಅಭಿವೃದ್ಧಿಗೆ ಮುಖ್ಯಮಂತ್ರಿ ಭೇಟಿ ಮಾಡುತ್ತೇನೆ. ಮುಖ್ಯಮಂತ್ರಿಗಳನ್ನು ಭೇಟಿಯಾದಾಕ್ಷಣ ಪಕ್ಷ ಬಿಡುತ್ತಾರೆ ಎಂದು ಅರ್ಥ ಕಲ್ಪಿಸುವುದು ಸರಿಯಲ್ಲ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.