'ಸಿಎಂ ಭೇಟಿಯಾದರೆಂದು ಜಿಟಿಡಿ ಪಕ್ಷ ಬಿಡ್ತಾರೆ ಅಂತ ಹೇಳಬೇಡಿ'

Published : Sep 16, 2019, 08:55 AM IST
'ಸಿಎಂ ಭೇಟಿಯಾದರೆಂದು ಜಿಟಿಡಿ ಪಕ್ಷ ಬಿಡ್ತಾರೆ ಅಂತ ಹೇಳಬೇಡಿ'

ಸಾರಾಂಶ

ಸಿಎಂ ಭೇಟಿಯಾದರೆಂದು ಜಿಟಿಡಿ ಪಕ್ಷ ಬಿಡ್ತಾರೆ ಅಂತ ಹೇಳಬೇಡಿ| ಅನರ್ಹರದ್ದೇ ತ್ರಿಶಂಕು ಸ್ಥಿತಿ, ಇನ್ನಾರು ಪಕ್ಷ ಬಿಡ್ತಾರೆ?: ಅನಿತಾ

ರಾಮನಗರ[ಸೆ.16]: ಅನರ್ಹ ಶಾಸ​ಕರು ತ್ರಿಶಂಕು ಸ್ಥಿತಿ​ಯ​ಲ್ಲಿ​ರು​ವು​ದನ್ನು ಎಲ್ಲರೂ ನೋಡು​ತ್ತಿ​ದ್ದಾರೆ. ಹೀಗಿ​ರು​ವಾಗ ಯಾವ ಶಾಸ​ಕರು ತಾನೇ ಪಕ್ಷ ತೊರೆದು ರಾಜ​ಕೀಯ ಭವಿಷ್ಯ ಹಾಳು ಮಾಡಿ​ಕೊ​ಳ್ಳಲು ಬಯ​ಸು​ತ್ತಾರೆ ಎಂದು ಶಾಸಕಿ ಅನಿತಾ ಕುಮಾ​ರ​ಸ್ವಾಮಿ ಪ್ರಶ್ನಿ​ಸಿ​ದರು.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಅತೃಪ್ತ ಶಾಸಕರ ಸ್ಥಿತಿ ನೋಡಿದ ಬಳಿಕ ಈಗಿರುವ ಶಾಸಕರು ಭವಿಷ್ಯ ಹಾಳು ಮಾಡಿಕೊಳ್ಳಲು ಸಿದ್ಧರಿಲ್ಲ. ಅಲ್ಲದೆ, ಬೇರೆ ಯಾರೂ ಪಕ್ಷ ಬಿಟ್ಟು ಹೋಗಲ್ಲ ಎಂದು ಹೇಳಿದರು.

ಮತ್ತೆ ಬಿಎಸ್‌ವೈ ಮನೆಗೆ ಹೆಜ್ಜೆ ಹಾಕಿದ ಜೆಡಿಎಸ್‌ ಶಾಸಕ ಜಿಟಿಡಿ!

ಮಾಜಿ ಸಚಿವ ಜಿ.ಟಿ. ದೇವೇಗೌಡರವರು ತಮ್ಮ ಕ್ಷೇತ್ರದ ಅಭಿ​ವೃದ್ಧಿ ಕಾರ್ಯ​ಗಳ ವಿಚಾ​ರ​ವಾಗಿ ಮುಖ್ಯಮಂತ್ರಿ ಬಿ.ಎಸ್‌.ಯಡಿ​ಯೂ​ರಪ್ಪ ಅವ​ರನ್ನು ಭೇಟಿ​ಯಾ​ಗಿ​ದ್ದಾರೆ. ಅದರಲ್ಲಿ ತಪ್ಪೇ​ನಿದೆ? ನಾನೂ ಕ್ಷೇತ್ರದ ಅಭಿವೃದ್ಧಿಗೆ ಮುಖ್ಯಮಂತ್ರಿ ಭೇಟಿ ಮಾಡುತ್ತೇನೆ. ಮುಖ್ಯಮಂತ್ರಿಗಳನ್ನು ಭೇಟಿಯಾದಾಕ್ಷಣ ಪಕ್ಷ ಬಿಡುತ್ತಾರೆ ಎಂದು ಅರ್ಥ ಕಲ್ಪಿಸುವುದು ಸರಿಯಲ್ಲ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ
ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಗೆ ವೆಂಕಟೇಶ್ ಪ್ರಸಾದ್ ಅಧ್ಯಕ್ಷ, ಚುನಾವಣಾ ಫಲಿತಾಂಶ ಪ್ರಕಟ