
ಬೆಂಗಳೂರು (ಮಾ.30): ಅನ್ನಭಾಗ್ಯ ಯೋಜನೆಯಿಂದ ಗುಳೆ ಹೋಗುವವರ ಸಂಖ್ಯೆ ಕಡಿಮೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನ ಫ್ರೀಡಂ ಪಾರ್ಕ್'ನಲ್ಲಿ ಏರ್ಪಡಿಸಿದ್ದ ಅನ್ನಭಾಗ್ಯ ಯೋಜನೆಯಲ್ಲಿ ಹೆಚ್ಚುವರಿ ಅಕ್ಕಿ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಿಎಂ, ಬಿಪಿಎಲ್ ಕಾರ್ಡ್'ದಾರರಿಗೆ ತಲಾ ವ್ಯಕ್ತಿಗೆ ನೀಡುತ್ತಿದ್ದ 5 ಕೆ.ಜಿ ಅಕ್ಕಿ ಸಾಲುತ್ತಿಲ್ಲ, ಹೀಗಾಗಿ ಎರಡು ಕೆಜಿ ಹೆಚ್ಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಇನ್ನು ಅನ್ನಭಾಗ್ಯವನ್ನು ಪ್ರತಿಪಕ್ಷಗಳು ಟೀಕಿಸುತ್ತಿವೆ, ಅವರಿಗೆಲ್ಲ ನೀವೇ ಉತ್ತರಿಸಬೇಕು ಎಂದು ಸಭಿಕರಿಗೆ ಸಿ.ಎಂ ಕರೆ ನೀಡಿದರು.
ಈ ಮೊದಲು ಮಾತನಾಡಿದ ಆಹಾರ ಖಾತೆ ಸಚಿವ ಯು.ಟಿ. ಖಾದರ್, ಸಂಘ ಸಂಸ್ಥೆಗಳಿಗೂ ಅನ್ನ ಭಾಗ್ಯ ಯೋಜನೆ ವಿಸ್ತರಣೆಯಾಗಿದೆ. ಉಚಿತ ಊಟ ವಸತಿ ಕೊಡುವ ಸಂಘ ಸಂಸ್ಥೆಗಳಿಗ ಪ್ರತಿಯೊಬ್ಬರಿಗೂ 15 ಕೆಜಿ ಅಕ್ಕಿ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.