ಅಧಿಕಾರ ಬಿಟ್ಟು ಕೆಳಗಿಳಿಯಿರಿ: ಕೇಜ್ರಿವಾಲ್'ಗೆ ಅಣ್ಣಾ ಹಜಾರೆ ಆಗ್ರಹ

Published : Sep 08, 2016, 12:50 PM ISTUpdated : Apr 11, 2018, 12:48 PM IST
ಅಧಿಕಾರ ಬಿಟ್ಟು ಕೆಳಗಿಳಿಯಿರಿ: ಕೇಜ್ರಿವಾಲ್'ಗೆ ಅಣ್ಣಾ ಹಜಾರೆ ಆಗ್ರಹ

ಸಾರಾಂಶ

ಪುಣೆ(ಸೆ. 08): ದಿಲ್ಲಿಯಲ್ಲಿ ಅಧಿಕಾರ ಹಿಡಿಯುವಾಗ ಅರವಿಂದ್ ಕೇಜ್ರಿವಾಲ್ ಮೂಡಿಸಿದ್ದ ನಿರೀಕ್ಷೆ ಹುಸಿಯಾಗಿದೆ. ಅವರು ಅಧಿಕಾರ ಬಿಟ್ಟು ಕೆಳಗಿಳಿಯಬೇಕು ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಆಗ್ರಹಿಸಿದ್ದಾರೆ. ಕೇಜ್ರಿವಾಲ್ ವೈಯಕ್ತಿಕವಾಗಿ ಒಳ್ಳೆಯವರೇ. ಆದರೆ, ಅವರ ಜೊತೆಗಿರುವವರು ಪಕ್ಷದ ವರ್ಚಸ್ಸಿಗೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ ಎಂದು ಅಣ್ಣಾ ಹಜಾರೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಆಮ್ ಆದ್ಮಿ ಪಕ್ಷದ ಸಚಿವರು ತಪ್ಪು ಕೆಲಸದಲ್ಲಿ ತೊಡಗಿರುವುದಕ್ಕೆ ಬಲವಾದ ಸಾಕ್ಷ್ಯ ಸಿಕ್ಕರೆ ತಾನು ಕೇಜ್ರಿವಾಲ್ ವಿರುದ್ಧ ಬೃಹತ್ ಪ್ರತಿಭಟನೆಯನ್ನು ಆರಂಭಿಸುವುದಾಗಿ ಅಣ್ಣಾ ಹಜಾರೆ ಎಚ್ಚರಿಕೆ ನೀಡಿದ್ದಾರೆ.

"ಕೇಜ್ರಿವಾಲ್ ಸಾಚಾತನದ ಬಗ್ಗೆ ನನಗೆ ಅನುಮಾನವಿಲ್ಲ. ಆದರೆ, ಚುನಾವಣೆಯಲ್ಲಿ ಗೆಲುವು ಸಾಧಿಸಲು ಇವರು ಜೊತೆ ಸೇರಿಸಿಕೊಂಡ ಜನರಿಂದ ಇವರ ಘನತೆಗೆ ಕುಂದು ಬಂದಿದೆ. ಜನರಿಗೆ ಇವರ ಬಗ್ಗೆ ಭ್ರಮನಿರಸನವಾಗಿದೆ. ಇವರು ಜನರ ವಿಶ್ವಾಸ ಮರಳಿ ಪಡೆದು ದೇಶ ಸೇವೆ ಮಾಡಬೇಕೆಂದಿದ್ದರೆ, ಅಧಿಕಾರವನ್ನು ತ್ಯಜಿಸಬೇಕು" ಎಂದು ಅಣ್ಣಾ ಹಜಾರೆ ಸಲಹೆ ನೀಡಿದ್ದಾರೆ.

"ಕೇಜ್ರಿವಾಲ್ ಅವರ ಆಪ್ ಪಕ್ಷವು ಪಂಜಾಬ್ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದೆ. ಪಕ್ಷದಲ್ಲಿ ಈಗ ನಡೆಯುತ್ತಿರುವ ಬೆಳವಣಿಗೆಗಳು ಮತದಾರರ ಮನಸಿನ ಮೇಲೆ ಪರಿಣಾಮ ಬೀರುತ್ತದೆ. ಈ ಹಿನ್ನೆಲೆಯಲ್ಲಿ ಕೇಜ್ರಿವಾಲ್ ಅವರು ಜನರ ನಂಬಿಕೆ ಗಳಿಸುವಂಥ ಕೆಲಸ ಮಾಡಬೇಜು" ಎಂದು ಅಣ್ಣಾ ಅಭಿಪ್ರಾಯಪಟ್ಟಿದ್ದಾರೆ.

ಪಂಜಾಬ್ ಚುನಾವಣೆಯಲ್ಲಿ ಆಪ್ ಪಕ್ಷದ ಟಿಕೆಟ್ ನೀಡಿಕೆ ವಿಷಯದಲ್ಲಿ ಮಹಿಳೆಯರನ್ನು ದುರ್ಬಳಕೆ ಮಾಡಲಾಗುತ್ತಿದೆ ಎಂಬ ವರದಿಯನ್ನು ಪ್ರಸ್ತಾಪಿಸಿದ ಅಣ್ಣಾ ಹಜಾರೆ, ಇದೊಂದು ದುರದೃಷ್ಟಕರ ಬೆಳವಣಿಗೆ ಎಂದು ವಿಷಾದಿಸಿದ್ದಾರೆ. ಒಳ್ಳೆಯ ವ್ಯಕ್ತಿತ್ವದ ಕೇಜ್ರಿವಾಲ್ ಅಧಿಕಾರಕ್ಕೆ ಬಂದಾಗ ಏನಾದರೂ ಒಳ್ಳೆಯದಾಗಬಹುದೆಂದು ನಿರೀಕ್ಷಿಸಿದ್ದೆ. ಆದರೆ, ಆಮ್ ಆದ್ಮಿಗೂ ಬೇರೆ ಪಕ್ಷಗಳಿಗೂ ಯಾವುದೇ ವ್ಯತ್ಯಾಸವಿಲ್ಲ ಎಂದು ಅಣ್ಣಾ ಹಜಾರೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ಮಾಜಿ ಆಪ್ ಸಚಿವ ಸಂದೀಪ್ ಕುಮಾರ್ ಅವರು ಮಹಿಳೆಯೊಂದಿಗೆ ಅಶ್ಲೀಲವಾಗಿ ವರ್ತಿಸುತ್ತಿರುವ ದೃಶ್ಯಗಳು ಮಾಧ್ಯಮಗಳಲ್ಲಿ ಪ್ರಸಾರವಾಗಿದ್ದವು. ಸಂದೀಪ್ ಕುಮಾರ್ ಅವರನ್ನ ಮಂತ್ರಿಪಟ್ಟದಿಂದಷ್ಟೇ ಅಲ್ಲ ಪಕ್ಷದಿಂದಲೂ ಆಪ್ ಉಚ್ಛಾಟಿಸಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಂತ್ರಾಲಯದ ಮಡಿಲಲ್ಲಿ 'ಡಿವೈನ್ ಸ್ಟಾರ್' ರಿಷಬ್ ಶೆಟ್ಟಿ: ರಾಯರ ದರ್ಶನ ಪಡೆದು ಧನ್ಯತೆ ಅನುಭವಿಸಿದ ಕಾಂತಾರ ನಟ!
ವೀರಪ್ಪನ್‌ಗಿಂತ, ಸಿದ್ದರಾಮಯ್ಯ ಕಾಲದಲ್ಲೇ ಆನೆ ಸಾವು ಜಾಸ್ತಿ.! ಅಂಕಿ-ಅಂಶ ಬಚ್ಚಿಟ್ಟ ಆರ್. ಅಶೋಕ್