
ನವದೆಹಲಿ (ಅ.02): ಗಾಂಧಿವಾದಿ ಅಣ್ಣಾ ಹಜಾರೆ ಇವತ್ತು ದೆಹಲಿಯ ರಾಜ್ ಘಾಟ್ ನಲ್ಲಿ ಮೌನ ಪ್ರತಿಭಟನೆ ನಡೆಸಿದರು.
ಲೋಕ್ ಪಾಲ್ ಮಂಡನೆಗೆ ಒತ್ತಾಯಿಸಿ ನಡೆಸಿದ ಸಾಂಕೇತಿಕ ನಿರಶನದ ನಂತರ ಮಾತನಾಡಿದ ಅಣ್ಣಾ ಹಜಾರೆ ಇದುವರೆಗೂ ಪ್ರಧಾನಿ ಮೋದಿಯವರಿಗೆ 30 ಪತ್ರಗಳನ್ನ ಬರೆದಿದ್ದು ಇಲ್ಲಿಯವರೆಗೂ ಮೋದಿಯಿಂದ ಒಂದೇ ಒಂದು ಪತ್ರಕ್ಕು ಉತ್ತರ ದೊರೆತಿಲ್ಲ ಅಂತಾ ಹೇಳಿದ್ದಾರೆ. ಲೋಕಪಾಲ್ ಮತ್ತು ಸ್ವಾಮಿನಾಥನ್ ಆಯೋಗದ ಶಿಫಾರಸುಗಳನ್ನು ಜಾರಿಗೆ ತರುವಂತೆ ಒತ್ತಾಯಿಸಿ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ . ಸಾಂಕೇತಿಕ ನಿರಶನದ ನಂತರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದಿರುವ ಅಣ್ಣಾ ಹಜಾರೆ ಪ್ರತಿಭಟನೆ ವೇಳೆ ಹಲವು ವಿಷಯಗಳನ್ನ ಸರ್ಕಾರದ ಮುಂದಿಡುತ್ತೇವೆ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.