
ತುಮಕೂರು (ನ.19): ಪ್ರಸಾದ ಖಾಲಿಯಾಗಿದೆ ಎಂದು ಹಳಸಿದ ಅನ್ನ ಸಾಂಬಾರನ್ನು ಭಕ್ತರಿಗೆ ನೀಡಲಾಗಿದೆ. ಶ್ರೀಕ್ಷೇತ್ರ ಗೋರವನಹಳ್ಳಿ ದೇವಸ್ಥಾನದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ.
ಶ್ರೀಲಕ್ಷ್ಮೀ ಆಸ್ಥಾನದಲ್ಲಿ ಪ್ರಸಾದಕ್ಕೂ ಬರ ಉಂಟಾಗಿದ್ಯಾ? ಕಾರ್ತಿಕ ಮಾಸದ ದೀಪೋತ್ಸವ ಹಿನ್ನೆಲೆಯಲ್ಲಿ ಏರ್ಪಡಿಸಿದ್ದ ಪ್ರಸಾದದಲ್ಲಿ ಕೆಲವರಿಗೆ ಮಾತ್ರೆ ಸಿಕ್ಕಿದೆ. ನಂತರ ಪ್ರಸಾದ ಖಾಯಿಯಾಯಿತು ಅಂತ, ಹಳಸಿದ ಅನ್ನ- ಸಾಬಾರನ್ನು ಕಲಿಸಿ ಭಕ್ತರಿಗೆ ನೀಡಿದ್ದಾರೆ. ಇದರಿಂದ ದೇವಸ್ಥಾನದ ಆಡಳಿತ ಮಂಡಳಿ ಕ್ರಮ ಖಂಡಿಸಿ ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೇವಸ್ಥಾನಕ್ಕೆ ಕೋಟಿ ಕೋಟಿ ಹಣ ಹರಿದು ಬರುತ್ತದೆ. ಆದರೂ ಕನಿಷ್ಠ ಪ್ರಸಾದ ಕೊಡಲು ಆಡಳಿತ ಮಂಡಳಿಗೆ ಸಾಧ್ಯವಾಗುವುದಿಲ್ವಾ ಅಂತ ಭಕ್ತರು ಕಿಡಿ ಕಾರಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.