
ಚಿಕ್ಕಮಗಳೂರು(ನ.2): ಕೌಂಟುಬಿಕ ಕಲಹದ ಮೂಲಕ ಭಾರೀ ಸುದ್ದಿ ಮಾಡಿದ್ದ ಮಾಜಿ ಶಾಸಕ ಕುಮಾರಸ್ವಾಮಿ ಈಗ ಮತ್ತೊಂದು ವಿವಾದದ ಸುಳಿಗೆ ಸಿಲುಕಿಕೊಂಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಕೂವೆ ಗ್ರಾಮದ ಕಲ್ಮನೆಯಲ್ಲಿ ಲೋಕೇಶ್ ಎನ್ನುವರಿಗೆ ಸೇರಿದ ಸರ್ವೇ ನಂಬರ್ 49ರಲ್ಲಿ ಇದ್ದ 3 ಎಕರೆ ಜಾಗವನ್ನು ಮಾಜಿ ಶಾಸಕ ಕುಮಾರಸ್ವಾಮಿ ಒತ್ತುವರಿ ಮಾಡಿ ಕಾಫೀ ತೋಟವನ್ನಾಗಿ ಪರಿರ್ವನೆ ಮಾಡಿದ್ದಾರೆ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ.
ಲೋಕೇಶ್ ರವರ ತೋಟದ ಪಕ್ಕದಲ್ಲೇ ಮಾಜಿ ಶಾಸಕ ಕುಮಾರಸ್ವಾಮಿ 7 ಎಕರೆ ತೋಟವಿದ್ದು, ಅದರ ಪಕ್ಕದಲ್ಲೇ ಇದ್ದ ಲೋಕೇಶ್ ಎನ್ನುವರಿಗೆ ಸೇರಿದ 3 ಎಕರೆ ಜಾಗವನ್ನು ಶಾಸಕರಾಗಿದ್ದ ಅವಧಿಯಲ್ಲಿ ಅಧಿಕಾರ ದುರುಪಯೋಗ ಮಾಡಿಕೊಂಡು ಒತ್ತುವರಿ ಮಾಡಿ ಸಾಗುವಳಿ ಮಾಡಿದ್ದಾರೆ ಎನ್ನುವ ಕೂಗು ಮೂಲ ಖಾತೆದಾರಿಂದ ಕೇಳಿ ಬರುತ್ತಿದೆ. ಈ ಬಗ್ಗೆ ಚಿಕ್ಕಮಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಶಾಸಕ ಕುಮಾರಸ್ವಾಮಿ ಯಾವುದೇ ಭೂಮಿಯನ್ನು ಒತ್ತುವರಿ ಮಾಡಿಲ್ಲ, ಜಿಲ್ಲಾಡಳಿಯಿಂದಲೇ ಸರ್ವೇ ಕಾರ್ಯ ನಡೆಸಲಿ, ಒಂದು ವೇಳೆ ಒತ್ತುವರಿಯಾಗಿದ್ದರೆ ಭೂಮಿಯನ್ನು ನೀಡಲು ಸಿದ್ದ ರಾಜಕೀಯ ದುರುಉದ್ದೇಶದಿಂದ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.