ರಾಜಿನಾಮೆ ನೀಡಿದ ಮತ್ತೋರ್ವ ಬಿಜೆಪಿ ಮುಖಂಡ

Published : Nov 20, 2018, 01:59 PM ISTUpdated : Nov 20, 2018, 02:01 PM IST
ರಾಜಿನಾಮೆ ನೀಡಿದ ಮತ್ತೋರ್ವ  ಬಿಜೆಪಿ ಮುಖಂಡ

ಸಾರಾಂಶ

ರಾಜಕೀಯ ಚಟುವಟಿಕೆಗಳು ಗರಿಗೆದರುತ್ತಿರುವ ಹೊತ್ತಿನಲ್ಲೇ ಬಿಜೆಪಿ ಶಾಕ್ ಎದುರಾಗಿದೆ. ಬಿಜೆಪಿ ಮುಖಂಡರೋರ್ವರು ಟಿಕೆಟ್ ಕೈ ತಪ್ಪಿದ ಕಾರಣದ ರಾಜಿನಾಮೆ ನೀಡಿದ್ದಾರೆ. 

ಜೈಪುರ್ :  ರಾಜಸ್ಥಾನದಲ್ಲಿ ಇನ್ನೇನು ಕಲೆವೇ ದಿನದಲ್ಲಿ ಚುನಾವಣೆ ನಡೆಯುತ್ತಿದ್ದು ಇದೇ ವೇಳೆ ಬಿಜೆಪಿ ಮುಖಂಡ ಶ್ರೀ ಕೃಷ್ಣ ಗುಪ್ತ ಪಕ್ಷಕ್ಕೆ ರಾಜಿನಾಮೆ ನೀಡಿ ಶಿವ ಸೇನೆ ಸೇರ್ಪಡೆಯಾಗಿದ್ದಾರೆ. 

ಕೇಂದ್ರ ಹಾಗೂ ಮಹಾರಾಷ್ಟ್ರದಲ್ಲಿ ಬಿಜೆಪಿ ಮೈತ್ರಿ ಪಕ್ಷವಾಗಿರುವ ಶಿವಸೇನೆ ಟಿಕೆಟ್ ಪಡೆದು ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿದ್ದಾರೆ. 

ಗುಪ್ತ ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ಅತ್ಯಂತ ಪ್ರಭಾವಿ ಮುಖಂಡರಾಗಿದ್ದು, ಬಿಜೆಪಿ ಟಿಕೆಟ್ ಪಡೆದು ಚುನಾವಣೆಯಲ್ಲಿ ಸ್ಪರ್ಧಿಸಲು ಕಾತುರರಾಗಿದ್ದರು. ಆದರೆ ಬಿಜೆಪಿ ಕಳೆದ ವಾರ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ಗುಪ್ತ ಹೆಸರನ್ನು ಕೈ ಬಿಡಲಾಗಿತ್ತು.  ಅಲ್ವಾರ್ ಕ್ಷೇತ್ರದಲ್ಲಿ ಗುಪ್ತ ಬದಲಿಗೆ ಸಂಜಯ್ ಶರ್ಮಾಗೆ ಟಿಕೆಟ್ ನೀಡಲಾಗಿತ್ತು. 

ಬಿಜೆಪಿ  ಟಿಕೆಟ್ ಕೈ ತಪ್ಪಿದ್ದರಿಂದ ಅಸಮಾಧಾನಗೊಂಡ ಗುಪ್ತ ಬಿಜೆಪಿಗೆ ಕೈ ಕೊಟ್ಟು ಶಿವಸೇನೆಯಿಂದ ಸ್ಪರ್ಧೆ ಮಾಡುತ್ತಿದ್ದಾರೆ. 

ಮುಂದಿನ ಡಿಸೆಂಬರ್ 7ರಂದು ರಾಜಸ್ಥಾನದಲ್ಲಿ ಚುನಾವಣೆ ನಡೆಯುತ್ತಿದ್ದು, ಡಿಸೆಂಬರ್ 11 ರಂದು ಫಲಿತಾಂಶ ಪ್ರಕಟವಾಗಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

8ನೇ ಕ್ಲಾಸ್ ಹುಡುಗಿ ಮೇಲೆ ಬಲತ್ಕಾರ, ಬೆದರಿಸಿ ಚಿನ್ನ ದೋಚಿದ್ದ 10ನೇ ಕ್ಲಾಸ್ ಹುಡುಗ ಅರೆಸ್ಟ್
ಬಿಜೆಪಿ ನಾಯಕನ ಸಂಬಂಧಿ 17ರ ಯುವಕನಿಗೆ ಚೂರಿ ಇರಿದು ಕೊಂದ ದುಷ್ಕರ್ಮಿಗಳು!