'ಗಜ' ಬಳಿಕ ತಮಿಳುನಾಡಿಗೆ ಮತ್ತೆ ಚಂಡಮಾರುತದ ಶಾಕ್‌!

Published : Dec 16, 2018, 12:09 PM IST
'ಗಜ' ಬಳಿಕ ತಮಿಳುನಾಡಿಗೆ ಮತ್ತೆ ಚಂಡಮಾರುತದ ಶಾಕ್‌!

ಸಾರಾಂಶ

ಈಗಾಗಲೇ ಗಜ ಚಂಡಮಾರುತದಿಂದ ಸಾಕಷ್ಟು ಸಂಕಷ್ಟ ಅನುಭವಿಸಿರುವ ತಮಿಳುನಾಡು ರಾಜ್ಯಕ್ಕೆ ಇದೀಗ ಮತ್ತೊಂದು ಚಂಡ ಮಾರುತದ ಭೀತಿ ಎದುರಾಗಿದೆ.

ಚೆನ್ನೈ[ಡಿ.16]: ಈಗಾಗಲೇ ಗಜ ಚಂಡಮಾರುತದಿಂದ ಸಾಕಷ್ಟುಸಂಕಷ್ಟಅನುಭವಿಸಿರುವ ತಮಿಳುನಾಡು ರಾಜ್ಯಕ್ಕೆ ಇದೀಗ ಮತ್ತೊಂದು ಚಂಡ ಮಾರುತದ ಭೀತಿ ಎದುರಾಗಿದೆ.

ಪೆಥಾಯ್‌ ಹೆಸರಿನ ಈ ಚಂಡಮಾರುತದ ಪರಿಣಾಮ ಆಂಧ್ರಪ್ರದೇಶದ ಕರಾವಳಿ ತೀರ ಹಾಗೂ ಉತ್ತರ ತಮಿಳನಾಡು ಮತ್ತು ಪುದುಚೇರಿ ಕರಾವಳಿ ಪ್ರದೇಶಗಳಲ್ಲಿ ಮುಂದಿನ ಎರಡು ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೆ, ಆಂಧ್ರಪ್ರದೇಶದ ಒಂಗೊಲೆ ಹಾಗೂ ಕಾಕಿನಾಡ ನಡುವಿನ ಪ್ರದೇಶಗಳಲ್ಲಿ ಭಾರೀ ಭೂಕುಸಿತವಾಗುವ ಭೀತಿ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಸದ್ಯ ಪ್ರತೀ ಗಂಟೆಗೆ 45-65 ಕಿ.ಮೀ ವೇಗವಾಗಿ ಬೀಸುತ್ತಿರುವ ಈ ಚಂಡಮಾರುತವು ಮುಂದಿನ 24 ಗಂಟೆಯಲ್ಲಿ ಮತ್ತಷ್ಟುತೀವ್ರತೆ ಪಡೆಯುವ ಸಾಧ್ಯತೆಯಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಪಶ್ಚಿಮ ಬಂಗಾಳದಲ್ಲಿ ಬಾಬ್ರಿ ಮಸೀದಿಗೆ ಅಡಿಗಲ್ಲು ಹಾಕಿದ ಟಿಎಂಸಿ ಶಾಸಕ
ಇಡಿಯಿಂದ ಮತ್ತೆ ಅನಿಲ್ ಅಂಬಾನಿ 1120 ಕೋಟಿ ಹೆಚ್ಚುವರಿ ಆಸ್ತಿ ಮುಟ್ಟುಗೋಲು