
ಬೆಂಗಳೂರು(ಡಿ.10): ಸದ್ಯ ಸುಪಾರಿ ನೀಡಿದ ಪ್ರಕರಣದಲ್ಲಿ ಸಿಸಿಬಿ ವಶದಲ್ಲಿರುವ ಪತ್ರಕರ್ತ ರವಿ ಬೆಳಗೆರೆ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ. ರವಿ ಬೆಳಗೆರೆ ಅವರ ಕಚೇರಿಯಲ್ಲಿ ಜಿಂಕೆ ಚರ್ಮ ಮತ್ತು ಆಮೆ ಚಿಪ್ಪು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಅಧಿಕಾರಿಗಳು ರವಿ ಬೆಳಗೆರೆ ಅವರ ವಿರುದ್ಧ ಎಫ್ಐಆರ್ ದಾಖಲು ಮಾಡಿದ್ದಾರೆ.
ರವಿ ಬೆಳಗೆರೆ ಅವರ ಕಚೇರಿಯಲ್ಲಿ ಸಿಸಿಬಿ ಅಧಿಕಾರಿಗಳು ಶೋಧ ಕಾರ್ಯ ನಡೆಸುತ್ತಿದ್ದ ವೇಳೆ ಜಿಂಕೆ ಚರ್ಮ ಮತ್ತು ಆಮೆ ಚಿಪ್ಪುಗಳು ಪತ್ತೆಯಾಗಿದ್ದವು. ಇವುಗಳನ್ನು ವಶಕ್ಕೆ ಪಡೆದುಕೊಂಡ ಸಿಸಿಬಿ ಅಧಿಕಾರಿಗಳು ಇದಕ್ಕೆ ಸಂಬಂಧಿಸಿದಂತೆ ಅರಣ್ಯಾಧಿಕಾರಿಗಳಿಗೆ ಪತ್ರ ಬರೆದು ತಿಳಿಸಿದ್ದರು. ಈ ಸಂಬಂಧ ಇದೀಗ ರವಿ ಬೆಳಗೆರೆ ಅವರ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು ಮಾಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.