
ಗಂಗಾವತಿ: ಗಂಗಾವತಿ ನಗರದಲ್ಲಿ ಬಿಜೆಪಿ ಮುಖಂಡರೇ ವಿಧಾನ ಸಭೆ ಚುನಾವಣೆಯಲ್ಲಿ ಖೋಟಾನೋಟು ಚಲಾವಣೆ ಮಾಡಿದ್ದಾರೆಂದು ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಗಂಭೀರವಾಗಿ ಆರೋಪಿಸಿದ್ದಾರೆ.
ಶನಿವಾರ ನಗರದ ಈದ್ಗಾ ಮೈದಾನದಲ್ಲಿ ರಂಜಾನ್ ಪ್ರಯುಕ್ತ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. 2014ರಲ್ಲಿ ಶಾಸಕ ಪರಣ್ಣ ಮುನವಳ್ಳಿ ಅವರಿಗೆ ವ್ಯಕ್ತಿಯೊಬ್ಬರು ಧಮ್ಮಿ ಹಾಕಿದ್ದರು.
ಈಗಲೂ ಸಹ ಧಮ್ಮಿ ಹಾಕಿದ್ದಲ್ಲದೆ ಕರೆ ಮಾಡಿ ಖೋಟಾನೋಟಿನ ವ್ಯವಹಾರದ ಬಗ್ಗೆ ಮಾತನಾಡಿದ್ದಾರೆ. ಸಂಭಾಷಣೆಯಲ್ಲಿ ಓರಿಜಿನಲ್-ಡುಪ್ಲಿಕೆಟ್ ಎಂಬ ಪದಗಳನ್ನು ಬಳಿಸಿದ್ದಾರೆ. ಹೀಗಾಗಿ ಖೋಟಾನೋಟಿನ ವ್ಯವಹಾರ ನಡೆದಿದೆ ಎಂಬ ಅನುಮಾನ ಮೂಡಿದ್ದು ಪೊಲೀಸರು ಸಮಗ್ರ ತನಿಖೆ ನಡೆಸಿದರೆ ಸತ್ಯಾಸತ್ಯತೆ ಹೊರಬರಲಿದೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.