
ಮೈಸೂರು (ಜ.08): ಸೆಕ್ಸ್ ಸ್ಕ್ಯಾಂಡಲ್'ಗೆ ಸ್ಯಾಂಡಲ್'ವುಡ್ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಸಾಧುಕೋಕಿಲ ನಿರೀಕ್ಷಣಾ ಜಾಮೀನು ಪಡೆದಿದ್ದಾರೆ.
ಮೈಸೂರಿನ 7 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಿಂದ ಜಾಮೀನು ಪಡೆದಿದ್ದಾರೆ. ಸಂತ್ರಸ್ತ ಯುವತಿ ಮ್ಯಾಜಿಸ್ಟ್ರೇಟ್ ಮುಂದೆ ನೀಡಿದ್ದ ಹೇಳಿಕೆ ಆಧರಿಸಿ ಅವರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿತ್ತು. ಸೆಕ್ಷನ್ 438 ಅಡಿ ಪೊಲೀಸರು ಪೂರ್ವ ಬಂಧನ ಮಾಡದಂತೆ ಸಾಧು ಕೋಕಿಲ ಜಾಮೀನು ಪಡೆದಿದ್ದಾರೆ.
ಜನವರಿ 2 ರಂದು ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಅಗತ್ಯಬಿದ್ದರೆ ವೈದ್ಯಕೀಯ ಅಥವಾ ಡಿಎನ್'ಎ ಪರೀಕ್ಷೆಗೆ ಒಳಗಾಗಬೇಕು. ಸಾಕ್ಷಿ ನಾಶ ಮಾಡಬಾರದು. ನೊಂದ ಯುವತಿಗೆ ಒತ್ತಡ ಹೇರಬಾರದು. 15 ದಿನಗಳ ಒಳಗೆ ತನಿಖಾಧಿಕಾರಿಗಳ ಮುಂದೆ ಹಾಜರಾಗಿ ಸಹಕರಿಸಬೇಕು. ಎಂಬ ಷರತ್ತುಗಳ ಮೇಲೆ ಜಾಮೀನು ಮಂಜೂರು ಮಾಡಿದೆ.
ಇದೇ ಪ್ರಕರಣದಲ್ಲಿ ನಟ ಮಂಡ್ಯ ರಮೇಶ್ ಹೆಸರು ಕೂಡ ಕೇಳಿ ಬಂದಿದೆ. ಆರೋಪಿ ಸ್ಪಾ ಮಾಲೀಕ ರಾಜೇಶ್ ಬಂಧನದಲ್ಲಿದ್ದು, ಜಾಮೀನು ಸಿಕ್ಕಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.