
ತುಮಕೂರು : ಅನುಮಾನಾಸ್ಪದವಾಗಿ ಸಾವಿಗೀಡಾದ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಅವರದ್ದು ಸಹಜ ಸಾವಲ್ಲ. ರಾಜ್ಯದಿಂದ ಸುಪಾರಿ ಕೊಟ್ಟು ಕೊಲೆ ಮಾಡಲಾಗಿದೆ ಎಂದು ತುಮಕೂರು ಬಿಜೆಪಿ ಸಂಸದ ಜಿಎಸ್ ಬಸವರಾಜು ಗಂಭೀರ ಆರೋಪ ಮಾಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯ ಸರ್ಕಾರ ಅನ್ನಭಾಗ್ಯವನ್ನು ತಮ್ಮ ಕೊಡುಗೆ ಎಂದು ಹೇಳುತ್ತಿದೆ. ಆದರೆ ಕೇಂದ್ರ ಸರ್ಕಾರದ ಪಾಲು ಅನ್ನಭಾಗ್ಯದಲ್ಲಿ ಹೆಚ್ಚಿದೆ. ಈ ಅನ್ನಭಾಗ್ಯ ಅಕ್ಕಿಯಲ್ಲೂ ಕೂಡ ರಾಜ್ಯ ಸರ್ಕಾರದ ಅವ್ಯವಹಾರ ನಡೆಸಿದೆ.
ಅನುರಾಗ್ ತಿವಾರಿ ಆಹಾರ ಇಲಾಖೆಯ ಹಗರಣವನ್ನು ಬಯಲು ಮಾಡುತ್ತಿದ್ದರು. ಹಾಗಾಗಿ ಅವರನ್ನು ಸುಪಾರಿ ಕೊಟ್ಟು ಹತ್ಯೆ ಮಾಡಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಅನುರಾಗ್ ತಿವಾರಿ ತುಮಕೂರು ಜಿಲ್ಲಾಧಿಕಾರಿಯಾಗಿ ಕೆಲಸ ಮಾಡಿದ ವ್ಯಕ್ತಿ. ವೈಯಕ್ತಿಕವಾಗಿ ನನಗೆ ತುಂಬಾ ಪರಿಚಯವಿದ್ದ ಪ್ರಮಾಣಿಕ ಅಧಿಕಾರಿ. ಅಂತಹ ಅಧಿಕಾರಿಯ ಕೊಲೆಯಾಗಿರುವುದು ದುರ್ದೈವ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.