ಒಕ್ಕಲಿಗರ ಸಂಘದ ಅಧ್ಯಕ್ಷ ಸ್ಥಾನದಿಂದ ಅಪ್ಪಾಜಿಗೌಡ ಪದಚ್ಯುತಿ

Published : Jan 06, 2017, 10:22 AM ISTUpdated : Apr 11, 2018, 12:36 PM IST
ಒಕ್ಕಲಿಗರ ಸಂಘದ ಅಧ್ಯಕ್ಷ ಸ್ಥಾನದಿಂದ ಅಪ್ಪಾಜಿಗೌಡ ಪದಚ್ಯುತಿ

ಸಾರಾಂಶ

ಜ.18ರಂದು ಒಕ್ಕಲಿಗರ ಸಂಘಕ್ಕೆ ಹೊಸ ಅಧ್ಯಕ್ಷರ ನೇಮಕಕ್ಕೆ ಚುನಾವಣೆ ನಿಗದಿ ಮಾಡಲಾಗಿದೆ. ಉಪಾಧ್ಯಕ್ಷರಾದ ಪ್ರಸನ್ನ, ಶಶಿಕಿರಣ್, ಖಜಾಂಜಿ ಕಾಳೇಗೌಡ ಮತ್ತು ಕಾರ್ಯದರ್ಶಿ ಸ್ಥಾನದಿಂದ ಮಂಜುನಾಥ್ ಪದಚ್ಯುತಿಗೊಳಿಸಲಾಗಿದೆ.

ಬೆಂಗಳೂರು(ಜ.06): ಒಕ್ಕಲಿಗರ ಸಂಘದ ಅಧ್ಯಕ್ಷ ಸ್ಥಾನದಿಂದ ಅಪ್ಪಾಜಿಗೌಡ ಪದಚ್ಯುತಿಗೊಳಿಸಿರುವುದಾಗಿ ಅಪ್ಪಾಜಿ ಗೌಡರ ವಿರೋಧಿ ಬಣ ಸ್ಪಷ್ಟಪಡಿಸಿದೆ. ಅಪ್ಪಾಜಿಗೌಡರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಒಕ್ಕಲಿಗರ ಸಂಘದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ರಿಜಿಸ್ಟ್ರಾರ್ ಬಸವಯ್ಯ ನೇತೃತ್ವದಲ್ಲಿ ಪದಚ್ಯುತಿಗೆ ನಿರ್ಧಾರ ಕೈಗೊಳ್ಳಲಾಗಿದೆ.

ಜ.18ರಂದು ಒಕ್ಕಲಿಗರ ಸಂಘಕ್ಕೆ ಹೊಸ ಅಧ್ಯಕ್ಷರ ನೇಮಕಕ್ಕೆ ಚುನಾವಣೆ ನಿಗದಿ ಮಾಡಲಾಗಿದೆ. ಉಪಾಧ್ಯಕ್ಷರಾದ ಪ್ರಸನ್ನ, ಶಶಿಕಿರಣ್, ಖಜಾಂಜಿ ಕಾಳೇಗೌಡ ಮತ್ತು ಕಾರ್ಯದರ್ಶಿ ಸ್ಥಾನದಿಂದ ಮಂಜುನಾಥ್ ಪದಚ್ಯುತಿಗೊಳಿಸಲಾಗಿದೆ.

ಒಟ್ಟು 35 ನಿರ್ದೇಶಕರಿರುವ ಕಾರ್ಯಕಾರಿಣಿ ಸಮಿತಿಯಲ್ಲಿ 18 ಮಂದಿ ನಿರ್ದೇಶಕರಿಂದ ಅವಿಶ್ವಾಸ ನಿರ್ಣಯ ಮಂಡಿಸಲಾಗಿದೆ. ಹಂಗಾಮಿ ಕಾರ್ಯದರ್ಶಿಯಾಗಿ ನಾರಾಯಮೂರ್ತಿ ನೇಮಕ  ಮಾಡಲಾಗಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಚಾಮರಾಜನಗರ: ಕೂಲಿ ಕೆಲಸ ಮುಗಿಸಿ ವಾಪಾಸ್ ಹೋಗುವ ವೇಳೆ ಕಾಡಾನೆ ದಾಳಿ; ವ್ಯಕ್ತಿ ದುರ್ಮರಣ
ಮಲ್ಲಿಕಾರ್ಜುನ ಖರ್ಗೆಗೆ 'ಭಾರತ ರತ್ನ' ನೀಡುವಂತೆ ಕಾಂಗ್ರೆಸ್ ಮುಖಂಡ ಆಗ್ರಹ