
ನವದೆಹಲಿ: ಕೇಂದ್ರೀಯ ನಾಗರಿಕ ಸೇವಾ ಪರೀಕ್ಷೆಗೆ ಸಲ್ಲಿಕೆಯಾಗುವ ಪ್ರತಿಯೊಂದು ಅರ್ಜಿಗಳನ್ನು ಪರೀಕ್ಷೆ ಎದುರಿಸಿದ್ದಾರೆ ಎಂದೇ ಪರಿಗಣಿಸಬೇಕು ಎಂಬ ಪ್ರಸ್ತಾವನೆಯನ್ನು ಕೇಂದ್ರೀಯ ಲೋಕಸೇವಾ ಆಯೋಗ(ಯುಪಿಎಸ್ಸಿ) ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮುಂದಿಟ್ಟಿದೆ.
ಈ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ಮನ್ನಿಸಿದಲ್ಲಿ, ತಮ್ಮ ಸಂಪನ್ಮೂಲ, ಶ್ರಮ ಮತ್ತು ಸಮಯಾವಕಾಶವೂ ಉಳಿತಾಯವಾಗಲಿದೆ ಎಂದು ಯುಪಿಎಸ್ಸಿ ಪ್ರತಿಪಾದಿಸಿದೆ. ಪ್ರತೀ ವರ್ಷ ಯುಪಿಎಸ್ಸಿ ಪರೀಕ್ಷೆಗೆ ಸುಮಾರು 9 ಲಕ್ಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸುತ್ತಾರೆ.
ಆದರೆ, ಇದರಲ್ಲಿ ಶೇ.50ರಷ್ಟುಅಭ್ಯರ್ಥಿಗಳು ಪರೀಕ್ಷೆಯನ್ನು ಎದುರಿಸುವುದೇ ಇಲ್ಲ. ಈ ಹಿನ್ನೆಲೆಯಲ್ಲಿ ಯುಪಿಎಸ್ಸಿ ಈ ನಿರ್ಧಾರಕ್ಕೆ ಬಂದಿದೆ. ಐಎಎಸ್ ಅಧಿಕಾರಿಯಾಗಲು ಇರುವ ಯುಪಿಎಸ್ ಪರೀಕ್ಷೆಯನ್ನು ಓರ್ವ ಅಭ್ಯರ್ಥಿ 6 ಬಾರಿ ಮಾತ್ರವೇ ಎದುರಿಸಬಹುದು. ಆದರೆ, ಈ ನಿಯಮ ಪರಿಶಿಷ್ಟಜಾತಿ ಮತ್ತು ಪಂಗಡಗಳಿಗೆ ಅನ್ವಯವಾಗುವುದಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.