ನಾವೇನು ಕಾಂಗ್ರೆಸ್‌ ಗುಲಾಮರೇ? ಮಾಜಿ ಸಿಎಂ ಕುಮಾರಸ್ವಾಮಿ ಕಿಡಿ

Published : Jun 19, 2017, 11:48 AM ISTUpdated : Apr 11, 2018, 01:11 PM IST
ನಾವೇನು ಕಾಂಗ್ರೆಸ್‌ ಗುಲಾಮರೇ? ಮಾಜಿ ಸಿಎಂ ಕುಮಾರಸ್ವಾಮಿ ಕಿಡಿ

ಸಾರಾಂಶ

ವಿಧಾನ ಪರಿಷತ್‌ ಸಭಾಪತಿ ಡಿ.ಎಚ್‌. ಶಂಕರಮೂರ್ತಿ ವಿರುದ್ಧ ಅವಿಶ್ವಾಸ ನಿರ್ಣಯ ವಿಚಾರದಲ್ಲಿ ನಾವೇನು ಕಾಂಗ್ರೆಸ್‌ ಗುಲಾಮರಂತೆ ಕೆಲಸ ಮಾಡುತ್ತೇವೆ ಎಂದು ಹೇಳಿದ್ದೇವೆಯೇ? ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಮಂಗಳೂರು: ವಿಧಾನ ಪರಿಷತ್‌ ಸಭಾಪತಿ ಡಿ.ಎಚ್‌. ಶಂಕರಮೂರ್ತಿ ವಿರುದ್ಧ ಅವಿಶ್ವಾಸ ನಿರ್ಣಯ ವಿಚಾರದಲ್ಲಿ ನಾವೇನು ಕಾಂಗ್ರೆಸ್‌ ಗುಲಾಮರಂತೆ ಕೆಲಸ ಮಾಡುತ್ತೇವೆ ಎಂದು ಹೇಳಿದ್ದೇವೆಯೇ? ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಕಾಂಗ್ರೆಸ್‌ ನಾಯಕರು ಜೆಡಿಎಸ್‌ ಅನ್ನು ‘ಟೇಕನ್‌ ಫಾರ್‌ ಗ್ರಾಂಟೆಡ್‌' ಎಂದು ತಿಳಿದುಕೊಂಡಿದ್ದಾರೆ. ಇಲ್ಲದಿದ್ದರೆ ಅವಿಶ್ವಾಸ ನಿರ್ಣಯ ಪ್ರಕ್ರಿಯೆ ಆರಂಭದಲ್ಲೇ ಜೆಡಿಎಸ್‌ಅನ್ನು ಸಂಪರ್ಕಿಸಲು ಮುಖ್ಯಮಂತ್ರಿಗೆ ಎಲ್ಲಿ ಹೋಗಿತ್ತು ಜ್ಞಾನ? ಆರಂಭದಲ್ಲಿ ಯಾರೂ ಪಕ್ಷವನ್ನು ಸಂಪರ್ಕಿಸಲಿಲ್ಲ. ಕೊನೆಯವರೆಗೂ ನಮ್ಮ ಸಂಪರ್ಕದಲ್ಲಿ ಅವರು ಇರಲೇ ಇಲ್ಲ. ಅವಿಶ್ವಾಸ ನಿರ್ಣಯಕ್ಕೆ ಪಕ್ಷೇತರ ಶಾಸಕರು ಕೈಜೋಡಿಸಲಿದ್ದಾರೆ, ಜೆಡಿಎಸ್‌ ಅಗತ್ಯವಿಲ್ಲ ಎಂದೇ ತಿಳಿದುಕೊಂಡಿದ್ದರು. ಕೊನೇ ಘಟ್ಟದಲ್ಲಿ ಪಕ್ಷೇತರರ ಬೆಂಬಲದ ಕೊರತೆಯಾದಾಗಲಷ್ಟೇ ತರಾತುರಿಯಲ್ಲಿ ನಮ್ಮ ಕಡೆ ಬಂದರು ಎಂದು ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

ಕಾಂಗ್ರೆಸ್‌ ಪಕ್ಷಕ್ಕೆ ಕೃತಜ್ಞತೆ ಎಂಬ ಪದದ ಅರ್ಥವೇ ಗೊತ್ತಿಲ್ಲ. ನಂಜನಗೂಡು, ಗುಂಡ್ಲುಪೇಟೆ ಉಪ ಚುನಾವಣೆಯಲ್ಲಿ ಅವರ ಗೆಲುವಿಗೆ ಕಾರಣ ನಾವು ಎಂಬುದನ್ನೇ ಮರೆತ ಮುಖ್ಯಮಂತ್ರಿಗಳು, ಈಗ ಕೋಮುವಾದಿಗಳ ಜೊತೆ ಕೈ ಜೋಡಿಸಿದವರೆಂದು ನಮ್ಮನ್ನು ಮೂದಲಿಸಿದ್ದಾರೆ ಎಂದು ಕಿಡಿಕಾರಿದರು.

ಅವಿಶ್ವಾಸ ಮಂಡನೆಯಲ್ಲಿ ವಿಫಲರಾದ ಬಳಿಕ ‘ಜೆಡಿಎಸ್‌ ಪಕ್ಷ ಕೋಮುವಾದಿಗಳೊಂದಿಗೆ ಕೈಜೋಡಿಸಿತ್ತು' ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದರು. ಜಾತ್ಯತೀತ ಮೌಲ್ಯಗಳನ್ನು ನಾನು ಸಿದ್ದರಾಮಯ್ಯ ಅವರಿಂದ ಕಲಿಯಬೇಕಿಲ್ಲ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತೀರ್ಥಹಳ್ಳಿಯ ವಿದ್ಯಾರ್ಥಿನಿಗೆ ಹೃದಯಾಘಾತ, ಶೃಂಗೇರಿ ಕಾಲೇಜು ಹಾಸ್ಟೆಲ್‌ನಲ್ಲಿ ಕುಸಿದು ಬಿದ್ದು ಸಾವು
ಪಿಯುಸಿ ಸರ್ಟಿಫಿಕೇಟ್ ಇದ್ದರೆ ಮಾತ್ರ ವಾಹನಕ್ಕೆ ಪೆಟ್ರೋಲ್ -ಡೀಸೆಲ್, ಡಿ.18ರಿಂದ ಹೊಸ ನಿಯಮ