
ಮೈಸೂರು(ಅ.02): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಾಡಹಬ್ಬ ದಸರಾ ಸಂಭ್ರಮ ಕಳೆಕಟ್ಟಿದೆ. ಜಂಬೂಸವಾರಿ ಮೆರವಣಿಗೆಗೆ ಇನ್ನೇನು 9 ದಿನಗಳು ಮಾತ್ರ ಬಾಕಿ ಇದೆ. ಹೀಗಾಗಿ, ಅಂಬಾರಿ ಹೊತ್ತು ಸಾಗಲಿರುವ ಅರ್ಜುನನಿಗೆ ಮರದ ಅಂಬಾರಿ ಕಟ್ಟಿ ತಾಲೀಮು ನಡೆಸಲಾಯಿತು.
ಸಂಪ್ರದಾಯಬದ್ದವಾಗಿ ಆನೆಗಳಿಗೆ ಪೂಜೆ ಸಲ್ಲಿಸಿದ ಬಳಿಕ ಮರದ ಅಂಬಾರಿ ಕಟ್ಟಿ ತಾಲೀಮು ಆರಂಭಿಸಲಾಗಿದೆ. ಅಂಭಾರಿ ಹೊರಲಿರುವ ಅರ್ಜುನನಿಗೆ ಇತರೆ ಆನೆಗಳು ಸಾಥ್ ನೀಡಿದ್ದವು. ಮರದ ಅಂಬಾರಿ ಹೊತ್ತ ಅರ್ಜುನ ೧ ಗಂಟೆ ೧೦ ನಿಮಿಷದ ಅವಧಿಯಲ್ಲಿ ಬಲರಾಮ ದ್ವಾರದಿಂದ ಬನ್ನಿಮಂಟಪದವರೆಗೆ ಸಾಗಿದ್ದಾನೆ.
ಮರದ ಅಂಬಾರಿ ಹೊತ್ತು ಅರಮನೆಯಿಂದ ಹೊರಟ ಅರ್ಜುನನಿಗೆ ಶಾಕ್ ಕಾದಿತ್ತು. ಗಜಗಾಂಭಿರ್ಯದಿಂದ ರಸ್ತೆಯಲ್ಲಿ ಸಾಗುತ್ತಿದ್ದ ವೇಳೆ ವಿದ್ಯುತ್ ತಂತಿ ತಗುಲಿತು. ಆರ್ಎಂಪಿ ವೃತ್ತದ ಬಳಿ ಮರದ ಅಂಬಾರಿಗೆ ವಿದ್ಯುತ್ ತಂತಿ ತಡೆ ಹೊಡೆಯಿತು. ಇದ್ರಿಂದ ಬೆದರಿದ ಅರ್ಜುನ ದಿಢೀರನೇ ಹಿಂದೆ ಸರದ. ಹೀಗಾಗಿ, ಕೆಲಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಯ್ತು. ರಸ್ತೆ ಮಧ್ಯೆ ಹಾದು ಹೋಗಿರುವ ವಿದ್ಯುತ್ ಹೈ ಟೆನ್ಷನ್ ಕೇಬಲ್ ಅನ್ನು ಗಮನಿಸದೇ ಮಾವುತ ಅರ್ಜುನನ್ನ ಮುನ್ನಡೆಸಿದ್ದೇ ಈ ಅವಾಂತರಕ್ಕೆ ಕಾರಣ ಎನ್ನುವ ಆರೋಪ ಕೇಳಿಬಂದಿದೆ. ಕೂಡಲೇ ಎಚ್ಚೆತ್ತ ಅರಣ್ಯಾಧಿಕಾರಿ ಅರ್ಜುನ ನನ್ನು ರಸ್ತೆ ಬದಿಗೆ ಕರೆತರುವಂತೆ ಮಾವುತರಿಗೆ ಸೂಚನೆ ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.