
ನವದೆಹಲಿ (ಸೆ.27): ಭಾರತೀಯ ಸೇನೆ ನಾಗಾ ಉಗ್ರರ ಅಡಗು ತಾಣಗಳ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡಿದೆ. ಮ್ಯಾನ್ಮಾರ್ ಗಡಿಯಲ್ಲಿ ಅಡಗಿದ್ದ ಉಗ್ರರ ತಾಣಗಳ ಮೇಲೆ ಇಂದು ಬೆಳಿಗ್ಗೆ 4.45 ರ ವೇಳೆ ಭಾರತೀಯ ಸೇನೆ ದಾಳಿ ನಡೆಸಿದೆ.
NSCN-K ಉಗ್ರ ಸಂಘಟನೆ ವಿರುದ್ಧ ಕಾರ್ಯಾಚರಣೆ ನಡೆಸಿದೆ. ಸರ್ಜಿಕಲ್ ದಾಳಿಗೆ ನಾಗಾ ಉಗ್ರರು ತತ್ತರಿಸಿದ್ದಾರೆ. ಹಲವು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.
ಸರ್ಜಿಕಲ್ ದಾಳಿ ವೇಳೆ ಭಾರತೀಯ ಯೋಧರು ಸುರಕ್ಷಿತರಾಗಿದ್ದಾರೆ. ಯೋಧರಿಗೆ ತೊಂದರೆ ಆಗಿಲ್ಲ ಎಂದು ಭಾರತೀಯ ಸೇನೆ ಸ್ಪಷ್ಪಡಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.