
ನವದೆಹಲಿ(ಜು.13): ಲಡಾಖ್ ಗಡಿ ಭಾಗದಲ್ಲಿ ಚೀನಿ ಸೈನಿಕರು ಒಳನುಸುಳಿದ್ದಾರೆ ಎಂಬ ವರದಿಗಳನ್ನು ಭೂಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅಲ್ಲಗಳೆದಿದ್ದಾರೆ.
ಇಲ್ಲಿನ ನ ಡೆಮ್ಚೋಕ್ ವಲಯದಲ್ಲಿ ಚೀನಿ ಸೈನಿಕರು ಭಾರತದ ಗಡಿಯೊಳಗೆ ಒಳನುಸುಳಿದ್ದಾರೆಂಬುದು ಕೇವಲ ವದಂತಿ ಎಂದು ರಾವತ್ ಸ್ಪಷ್ಟಪಡಿಸಿದ್ದಾರೆ.
ಕಳೆದ ಜು.6ರಂದು ದಲೈ ಲಾಮಾ ಹುಟ್ಟುಹಬ್ಬದ ಪ್ರಯುಕ್ತ ಟಿಬೆಟ್ ಧ್ವಜವನ್ನು ಹಾರಿಸಲಾಗಿತ್ತು. ಇದರಿಂದ ಕುಪಿತಗೊಂಡಿದ್ದ ಚೀನಾ ತನ್ನ ಸೈನಿಕರನ್ನು ಭಾರತದ ಗಡಿಯೊಳಗೆ ನುಗ್ಗಿಸಿದೆ ಎಂಬ ಮಾತುಗಳು ಕೇಳಿ ಬಂದಿದ್ದವು.
ಚೀನಿ ಸೈನಿಕರು ಭಾರತದ ಗಡಿಯೊಳಗೆ ನುಸುಳಿದ್ದಾರೆಂಬುದು ಕೇವಲ ವದಂತಿ ಎಂದಿರುವ ರಾವತ್, ಟಿಬೆಟಿಯನ್ನರ ಸಂಭ್ರಮಾಚರಣೆ ಕಂಡು ಚೀನಾ ಗಸ್ತು ಪಡೆ ಏನಾಗುತ್ತಿದೆ ಎಂದು ತಿಳಿಯಲು ಗಡಿ ಸಮೀಪ ಬಂದಿದ್ದರಷ್ಟೇ ಎಂದು ಸ್ಪಷ್ಟಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.