POK ಕಸಿಯಲು ನಾವು ರೆಡಿ: ರಾವತ್ ಹೇಳಿಕೆಯಿಂದ ಪಾಕ್‌ನಲ್ಲಿ ಗಡಿಬಿಡಿ!

Published : Sep 12, 2019, 05:04 PM IST
POK ಕಸಿಯಲು ನಾವು ರೆಡಿ: ರಾವತ್ ಹೇಳಿಕೆಯಿಂದ ಪಾಕ್‌ನಲ್ಲಿ ಗಡಿಬಿಡಿ!

ಸಾರಾಂಶ

ಕೇಂದ್ರ ಸರ್ಕಾರ ಹೇಳಿದರೆ POK ಮರುವಶಕ್ಕೆ ಸೇನೆ ಸಿದ್ಧ ಎಂದ ಭೂಸೇನಾ ಮುಖ್ಯಸ್ಥ| ‘ಸರ್ಕಾರ ಕೈಗೊಳ್ಳುವ ನಿರ್ಣಯ ಪಾಲಿಸುವುದು ಸೇನೆಯ ಕರ್ತವ್ಯ’| ಸರ್ಕಾರ POK ಮರುವಶ ಬಯಸುವುದಾದರೆ ಅದಕ್ಕೆ ಸೇನೆ ಸಿದ್ಧ ಎಂದ ಜನರಲ್ ಬಿಪಿನ್ ರಾವತ್| ಭಾರತದ ಮುಂದಿನ ಗುರಿ ಪಾಕ್ ಆಕ್ರಮಿತ ಕಾಶ್ಮೀರ ಎಂದಿದ್ದ ಕೇಂದ್ರ ಸಚಿವ ಜಿತೇಂದ್ರ ಸಿಂಗ್|

ನವದೆಹಲಿ(ಸೆ.12): ಪಾಕ್ ಆಕ್ರಮಿತ ಕಾಶ್ಮೀರವನ್ನು ಮರುವಶಪಡಿಸಿಕೊಳ್ಳಲು ಕೇಂದ್ರ ಸರ್ಕಾರ ಆದೇಶಿಸಿದರೆ, ಆದೇಶವನ್ನು ಪಾಲಿಸಲು ಭಾರತೀಯ ಸೇನೆ ಸರ್ವ ಸನ್ನದ್ಧವಾಗಿದೆ ಎಂದು ಸೇನಾಧ್ಯಕ್ಷ ಜನರಲ್ ಬಿಪಿನ್ ರಾವತ್ ಸ್ಪಷ್ಟಪಡಿಸಿದ್ದಾರೆ.

ಭಾರತದ ಮುಂದಿನ ಗುರಿ ಪಾಕ್ ಆಕ್ರಮಿತ ಕಾಶ್ಮೀರ ಎಂಬ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಜನರಲ್ ರಾವತ್, ಕೇಂದ್ರ ಸರ್ಕಾರ ಕೈಗೊಳ್ಳುವ ನಿರ್ಣಯಗಳನ್ನು ಪಾಲಿಸುವುದು ಭಾರತೀಯ ಸೇನೆಯ ಕರ್ತವ್ಯ ಎಂದು ಮಾರ್ಮಿಕವಾಗಿ ಹೇಳಿದ್ದಾರೆ.

pok ಮರುವಶ ಕುರಿತು ಕೇಂದ್ರ ಸರ್ಕಾರ ನಿರ್ಣಯ ಕೖಗೊಳ್ಳಬೇಕೆ ಹೊರತು ಸೇನೆಯಲ್ಲ, ಆದರೆ ಸರ್ಕಾರ ಮರುವಶಕ್ಕೆ ಆದೇಶ ನೀಡಿದರೆ ಅದಕ್ಕೆ ಸೇನೆ ಸರ್ವ ಸನ್ನದ್ಧವಾಗಿದೆ ಎಂದು ಜನರಲ್ ರಾವತ್ ಸ್ಪಷ್ಟಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೇವಲ 2 ನಿಮಿಷ ಮಗಳ ನೋಡಲು 11ಗಂಟೆಗೆ ಸ್ಟೇಶನ್‌ಗೆ ಬಂದ ತಂದೆ, ಭಾವುಕ ಕ್ಷಣದ ವಿಡಿಯೋ
ಬೀದಿಯಲ್ಲಿ ಬಿದ್ದಿದ್ದ ಕಲ್ಲಿಂದ ಹಣ ಮಾಡೋದು ಹೇಗೆ ಎಂದು ತೋರಿಸಿಕೊಟ್ಟ ಹುಡುಗ: ವೀಡಿಯೋ ಭಾರಿ ವೈರಲ್