
ಶ್ರೀನಗರ(ಮೇ.05): ವಸತಿ ಪ್ರದೇಶಗಳಲ್ಲಿ ಅಡಗಿ ಭದ್ರತಾ ಪಡೆಗಳ ಮೇಲೆ ದಾಳಿ ನಡೆಸುತ್ತಿರುವ ಭಯೋತ್ಪಾದಕರನ್ನು ಹೊರಗೆಳೆದು ಮಟ್ಟಹಾಕಲು ಬೃಹತ್ ಪ್ರಮಾಣದ ಕಾರ್ಯಾಚರಣೆಯನ್ನು ಭದ್ರತಾ ಪಡೆಗಳು ಆರಂಭಿಸಿವೆ.
1990ರ ದಶಕದಲ್ಲಿ ನಿಲ್ಲಿಸಲಾಗಿದ್ದ ಪ್ರತಿ ಮನೆ-ಮನೆಗೂ ತೆರಳಿ ಭಯೋತ್ಪಾದಕರಿಗಾಗಿ ಶೋಧ ನಡೆಸುವ ಕಾರ್ಯಾಚರಣೆಯನ್ನು ಮತ್ತೆ ಆರಂಭಿಸಲಾಗಿದೆ. ಹೆಲಿಕಾಪ್ಟರ್, ಡ್ರೋನ್'ಗಳ ಸಹಾಯದಿಂದ 4 ಸಾವಿರ ಯೋಧರು ಶೋಪಿಯಾನ್ ಜಿಲ್ಲೆಯಲ್ಲಿ ಉಗ್ರರ ಪತ್ತೆ ಹಚ್ಚುವ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸೇನೆ, ಪೊಲೀಸ್ ಹಾಗೂ ಸಿಆರ್'ಪಿಎಫ್ ಸಿಬ್ಬಂದಿಯನ್ನು ಒಳಗೊಂಡ ಭದ್ರತಾ ತಂಡ ಗುರುವಾರ ಮುಂಜಾನೆಯಿಂದ ಶೋಪಿಯಾನ್ ಜಿಲ್ಲೆಯ ಡಜನ್ ಹಳ್ಳಿಗಳಲ್ಲಿ ಕಾರ್ಯಾಚರಣೆ ನಡೆಸಿದೆ.
ಪ್ರತಿ ಹಳ್ಳಿಗೆ ತೆರಳುವ ಭದ್ರತಾ ಸಿಬ್ಬಂದಿ, ಗ್ರಾಮಸ್ಥರನ್ನು ಒಂದು ಕಡೆ ಕಲೆ ಹಾಕಿ, ಅವರ ಮನೆಯಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಉಗ್ರರು ಶೋಪಿಯಾನ್ ಜಿಲ್ಲೆಯಲ್ಲಿದ್ದಾರೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ಆರಂಭಿಸಲಾಗಿದೆ. ಈ ನಡುವೆ ದಿನದ ಕಾರ್ಯಾಚರಣೆ ಮುಗಿಸಿ ಬರುವಾಗ ಉಗ್ರರು ಯೋಧರತ್ತ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಓರ್ವ ನಾಗರಿಕ ಬಲಿಯಾಗಿದ್ದಾನೆ ಎಂದು ವರದಿಯಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.