ಗಡಿಯಲ್ಲಿ ಮತ್ತೆ ಗುಂಡಿನ ಮೊರೆತ: ಮೂವರು ಯೋಧರು ಹುತಾತ್ಮ

Published : Dec 23, 2017, 09:40 PM ISTUpdated : Apr 11, 2018, 12:51 PM IST
ಗಡಿಯಲ್ಲಿ ಮತ್ತೆ ಗುಂಡಿನ ಮೊರೆತ: ಮೂವರು ಯೋಧರು ಹುತಾತ್ಮ

ಸಾರಾಂಶ

ಪ್ರಸಕ್ತ ವರ್ಷವೊಂದರಲ್ಲೇ ಪಾಕಿಸ್ತಾನವೂ 780 ಬಾರಿ ಕದನ ವಿರಾಮ ಉಲ್ಲಂಘಿಸಿದೆ. ಈ ಗುಂಡಿನ ಚಕಮಕಿಯಲ್ಲಿ 12 ಮಂದಿ ನಾಗರೀಕರು ಸೇರಿದಂತೆ ಒಟ್ಟು 33 ಮಂದಿ ಮೃತಪಟ್ಟಿದ್ದಾರೆ ಎಂದು ಸೇನೆಯ ಉನ್ನತ ಮೂಲಗಳು ತಿಳಿಸಿವೆ.

ಶ್ರೀನಗರ(ಡಿ.23): ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆಯಾಗಿದ್ದು, ಕಾಶ್ಮೀರದಲ್ಲಿ ನಡೆದ ಗುಂಡಿನ ಮೊರೆತಕ್ಕೆ ಭಾರತೀಯ ಸೇನೆಯ ಓರ್ವ ಮೇಜರ್ ಮತ್ತು ಮೂವರು ಯೋಧರು ಹುತಾತ್ಮರಾಗಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಕೇರಿ ವಲಯದ ಗಡಿ ನಿಯಂತ್ರಣ ರೇಖೆಯ ಬಳಿ ನಡೆದ ಪಾಕಿಸ್ತಾನಿ ಸೈನಿಕರಿಂದ ನಡೆದ ಅಪ್ರಚೋದಿತ ಗುಂಡಿನ ದಾಳಿಗೆ ಮೇಜರ್ ಮೋಹರ್ಕರ್ ಪ್ರಫುಲ್ಲ ಅಂಬಾದಾಸ್, ಲ್ಯಾನ್ಸ್ ನಾಯ್ಕ್ ಗುರ್ಮೇಲ್ ಸಿಂಗ್, ಸಿಪಾಯಿ ಪರ್ಗತ್ ಸಿಂಗ್ ಗಂಭೀರ ಗಾಯಗೊಂಡು ಬಳಿಕ ಕೊನೆಯುಸಿರೆಳೆದರು. ಆದರೆ ಸೇನಾ ಮೂಲಗಳ ಪ್ರಕಾರ, ನಾಲ್ವರು ಸೇನಾ ಸಿಬ್ಬಂದಿ ಮೃತರಾಗಿದ್ದಾರೆ ಎನ್ನಲಾಗಿದೆ. ಇತರ ಇಬ್ಬರು ಸಿಬ್ಬಂದಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸೇನಾ ವಕ್ತಾರ ತಿಳಿಸಿದ್ದಾರೆ.

ಮೇಜರ್ ಅಂಬಾದಾಸ್ ಮಹಾರಾಷ್ಟ್ರದ ಭಂಡಾರ ಜಿಲ್ಲೆಯವರಾದರೆ, ಲ್ಯಾನ್ಸ್ ಗುರ್ಮೇಲ್ ಸಿಂಗ್ ಪಂಜಾಬ್‌'ನ ಅಮೃತಸರದವರು,ಇನ್ನು ಸಿಪಾಯಿ ಪರ್ಗತ್ ಸಿಂಗ್ ಹರ್ಯಾಣದ ಕರ್ನಲ್ ಜಿಲ್ಲೆಯವರು.

ಪ್ರಸಕ್ತ ವರ್ಷವೊಂದರಲ್ಲೇ ಪಾಕಿಸ್ತಾನವೂ 780 ಬಾರಿ ಕದನ ವಿರಾಮ ಉಲ್ಲಂಘಿಸಿದೆ. ಈ ಗುಂಡಿನ ಚಕಮಕಿಯಲ್ಲಿ 12 ಮಂದಿ ನಾಗರೀಕರು ಸೇರಿದಂತೆ ಒಟ್ಟು 33 ಮಂದಿ ಮೃತಪಟ್ಟಿದ್ದಾರೆ ಎಂದು ಸೇನೆಯ ಉನ್ನತ ಮೂಲಗಳು ತಿಳಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ 2025-26 ವೇಳಾಪಟ್ಟಿ, ಸುತ್ತೋಲೆ ಹೊರಡಿಸಿದ ಶಿಕ್ಷಣ ಇಲಾಖೆ
ಬೈಕ್ ರೈಡಿಂಗ್‌ನಲ್ಲಿರುವ ಗಂಡನ ಮೇಲೆ ಆಕ್ರೋಶ ತೀರಿಸಿಕೊಂಡ ಹೆಂಡತಿ, ವಿಡಿಯೋ ವೈರಲ್