
ನವದೆಹಲಿ (ಜ.2): ಪುಲ್ವಾಮದಲ್ಲಿ ಎನ್ಕೌಂಟರ್ ನಡೆದು 5 ಸಿಆರ್’ಪಿಎಫ್ ಸಿಬ್ಬಂದಿ ಹುತಾತ್ಮರಾದ ಬೆನ್ನಲ್ಲೇ ಬಿಜೆಪಿ ಸಂಸದರೋರ್ವರು ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ.
ಸೈನಿಕರು ಸಾಯದಿರುವ ದೇಶ ಯಾವುದಿದೆ ಎಂದು ಪ್ರಶ್ನೆ ಮಾಡಿದ್ದಾರೆ. ಎಲ್ಲಾ ದೇಶಗಳಲ್ಲಿಯೂ ಕೂಡ ಸೈನಿಕರು ಸಾಯುತ್ತಾರೆ. ಇದು ಪ್ರತಿನಿತ್ಯ ನಡೆಯುವ ಘಟನೆ ಎಂದು ಬಿಜೆಪಿ ಎಂಪಿ ನೇಪಾಳ್ ಸಿಂಗ್ ಹೇಳಿದ್ದಾರೆ.
ಇಂತಹ ಘಟನೆಗಳು ನಡೆದಾಗ ಗಾಯಗಳಾಗುತ್ತದೆ.. ಅಲ್ಲದೇ ಯಾವುದಾದರೂ ಜೀವವನ್ನು ರಕ್ಷಣೆ ಮಾಡುವಂತಹ ಆಯುಧ ಇದೆಯೇ, ಬುಲೆಟ್’ಗಳನ್ನು ತಡೆಯುವ ಸಾಮರ್ಥ್ಯ ಇರುವಂತದ್ದು ಇದೆಯಾ ಎಂದಿದ್ದಾರೆ.
ಹೇಳಿಕೆ ವಿವಾದಕ್ಕೆ ಒಳಗಾಗುತ್ತಿದ್ದಂತೆ ತಮ್ಮ ಹೇಳಿಕೆ ಬಗ್ಗೆ ಅವರು ಕ್ಷಮೆ ಯಾಚಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.