'ಕಾಶ್ಮೀರದಲ್ಲಿ ಕಲ್ಲು ತೂರುವವನನ್ನು ಪೊಲೀಸ್ ಜೀಪ್’ಗೆ ಕಟ್ಟುವ ಬದಲು ಅರುಂಧತಿ ರಾಯ್ ಅವರನ್ನು ಕಟ್ಟಿ'

Published : May 23, 2017, 02:33 PM ISTUpdated : Apr 11, 2018, 12:47 PM IST
'ಕಾಶ್ಮೀರದಲ್ಲಿ ಕಲ್ಲು ತೂರುವವನನ್ನು ಪೊಲೀಸ್ ಜೀಪ್’ಗೆ ಕಟ್ಟುವ ಬದಲು ಅರುಂಧತಿ ರಾಯ್ ಅವರನ್ನು ಕಟ್ಟಿ'

ಸಾರಾಂಶ

ಕಾಶ್ಮೀರದಲ್ಲಿ ಕಲ್ಲು ತೂರುವವನನ್ನು ಪೊಲೀಸ್ ಜೀಪ್’ಗೆ ಕಟ್ಟುವ ಬದಲು ಲೇಖಕಿ ಅರುಂಧತಿ ರಾಯ್ ಅವರನ್ನು ಕಟ್ಟಿ ಎನ್ನುವ ಮೂಲಕ ಬಾಲಿವುಡ್ ನಟ, ಬಿಜೆಪಿ ಸಂಸದ ಪರೇಶ್ ರಾವಲ್ ಟ್ವೀಟಿಸಿದ್ದು ವ್ಯಾಪಕ ಪರ-ವಿರೋಧ ಚರ್ಚೆಗೆ ಕಾರಣವಾಗಿದೆ.

ನವದೆಹಲಿ (ಮೇ.23): ಕಾಶ್ಮೀರದಲ್ಲಿ ಕಲ್ಲು ತೂರುವವನನ್ನು ಪೊಲೀಸ್ ಜೀಪ್’ಗೆ ಕಟ್ಟುವ ಬದಲು ಲೇಖಕಿ ಅರುಂಧತಿ ರಾಯ್ ಅವರನ್ನು ಕಟ್ಟಿ ಎನ್ನುವ ಮೂಲಕ ಬಾಲಿವುಡ್ ನಟ, ಬಿಜೆಪಿ ಸಂಸದ ಪರೇಶ್ ರಾವಲ್ ಟ್ವೀಟಿಸಿದ್ದು ವ್ಯಾಪಕ ಪರ-ವಿರೋಧ ಚರ್ಚೆಗೆ ಕಾರಣವಾಗಿದೆ.

ಎಪ್ಪತ್ತು ಲಕ್ಷ ಯೋಧರಿಂದ ಕಾಶ್ಮೀರದ ಚಿತ್ರಣ ಬದಲಿಸಲು ಸಾಧ್ಯವಿಲ್ಲ ಎಂದು ಅರುಂಧತಿ ರಾಯ್ ಹೇಳಿಕೆ  ಹಿನ್ನೆಲೆಯಲ್ಲಿ ಪರೇಶ್ ರಾವಲ್ ಕಿಡಿಕಾರಿದ್ದಾರೆ. ಇನ್ನು ಮುಂದುವರೆದು ಆಕೆಯ ಜನನ ಪ್ರಮಾಣ ಪತ್ರವು ಹೆರಿಗೆ ವಾರ್ಡ್ ನೀಡಿದ ಪಶ್ಚಾತ್ತಾಪದ ಪತ್ರ ಎಂದು ವ್ಯಂಗ್ಯವಾಡಿದ್ದಾರೆ.

ಕಳೆದ ತಿಂಗಳು ಸೇನೆಯ ಮೇಲೆ ಕಲ್ಲು ತೂರಾಟ ಮಾಡಿದವನೊಬ್ಬನನ್ನು ಸೇನಾ ಸಿಬ್ಬಂದಿ ಜೀಪ್ ಎದುರು ಕಟ್ಟಿಕೊಂಡು ಹೋಗಿರುವ ವಿಡಿಯೋ ವೈರಲ್ ಆಗಿ ವಿವಾದಕ್ಕೆ ಎಡೆಯಾಗಿತ್ತು. ಇದನ್ನೇ ಮುಂದಿಟ್ಟುಕೊಂಡು ಅರುಂಧತಿ ರಾಯ್ ಹೇಳಿಕೆ ನೀಡಿದ್ದರು. ಇವರ ಹೇಳಿಕೆಗೆ ಪರೇಶ್ ರಾವಲ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ರಾವಲ್ ಹೇಳಿಕೆಯನ್ನು ಖಂಡಿಸಿ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಪಿಡಿಪಿ-ಬಿಜೆಪಿ ಮೈತ್ರಿಗೆ ಕಾರಣನಾದ ವ್ಯಕ್ತಿಯನ್ನೇಕೆ ಕಟ್ಟಬಾರದು ಎಂದು ಪ್ರಶ್ನಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ