ಇಡೀ ದಿನ ಪರಸ್ಪರ ಬಂದೂಕು ಹಿಡಿದು ನಿಂತ ಭಾರತ-ಚೀನಾ ಸೈನಿಕರು!

Published : Sep 12, 2019, 01:03 PM IST
ಇಡೀ ದಿನ ಪರಸ್ಪರ ಬಂದೂಕು ಹಿಡಿದು ನಿಂತ ಭಾರತ-ಚೀನಾ ಸೈನಿಕರು!

ಸಾರಾಂಶ

ಗಡಿಯಲ್ಲಿ ಮತ್ತೆ ಚೀನಿ ಸೈನಿಕರಿಂದ ಉದ್ವಿಗ್ನ ವಾತಾವರಣ ಸೃಷ್ಟಿ| ಲಡಾಖ್ ಬಳಿಯ ಪ್ಯಾಂಗಾಂಗ್ ಸರೋವರದ ಬಳಿ ಭಾರತ-ಚೀನಾ ಸೈನಿಕರ ಜಟಾಪಟಿ| ಭಾರತೀಯ ಸೈನಿಕರು ಗಸ್ತು ತಿರುಗುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಚೀನಿ ಸೈನಿಕರು| ಇಡೀ ದಿನ ಪರಸ್ಪರ ಬಂದೂಕು ಹಿಡಿದು ನಿಂತ ಉಭಯ ಸೇನೆಯ ಸೈನಿಕರು| ಸಂಜೆ ವೇಳೆ ಉಭಯ ಸೇನೆಯ ಸೇನಾಧಿಕಾರಿಗಳ ಸಂಧಾನ ಮಾತುಕತೆ ಯಶಸ್ವಿ|

ಲೇಹ್(ಸೆ.12): ಭಾರತ-ಚೀನಾ ನಡುವಿನ ಗಡಿ ಸಮಸ್ಯೆ ಬಗೆಹರಿಯುವ ಲಕ್ಷಣ ಕಾಣುತ್ತಿಲ್ಲ. ಉಭಯ ರಾಷ್ಟ್ರಗಳ ನಡುವಿನ ಗಡಿಯಲ್ಲಿನ ಉದ್ವಿಗ್ನ ಪರಿಸ್ಥಿತಿ ಆಗಾಗ ಸ್ಫೋಟವಾಗುತ್ತಲೇ ಇದ್ದು, ಮತ್ತೆ ಚೀನಾ-ಭಾರತ ಸೈನಿಕರು ಪರಸ್ಪರ ಸಂಘರ್ಷ ನಡೆಸಿದ ಘಟನೆ ವರದಿಯಾಗಿದೆ.

ಸೇನಾ ಮಾಹಿತಿ ಪ್ರಕಾರ ಜಮ್ಮು ಮತ್ತು ಕಾಶ್ಮೀರದ ಲಡಾಖ್ ಬಳಿಯ ಪ್ಯಾಂಗಾಂಗ್ ಸರೋವರದ ಬಳಿ ಭಾರತ ಮತ್ತು ಚೀನಾ ಸೇನೆ ನಡುವೆ ಸಂಘರ್ಷ ಏರ್ಪಟ್ಟಿದೆ. 

ಪ್ಯಾಂಗಾಂಗ್ ಸರೋವರದ ಬಳಿ ವಾಸ್ತವಿಕ ಗಡಿ ರೇಖೆಯ ಬಳಿ ನಿನ್ನೆ ಭಾರತೀಯ ಸೈನಿಕರು ಗಸ್ತು ತಿರುಗುವ ವೇಳೆ, ಚೀನಿ ಸೈನಿಕರೊಂದಿಗೆ ಸಂಘರ್ಷ ಏರ್ಪಟ್ಟಿದೆ ಎಂದು ಸೇನೆ ಮಾಹಿತಿ ನೀಡಿದೆ.

ಭಾರತೀಯ ಸೈನಿಕರು ಗಸ್ತು ತಿರುಗುವುದಕ್ಕೆ ಚೀನಿ ಸೈನಿಕರು ಆಕ್ಷೇಪ ವ್ಯಕ್ತಪಡಿಸಿದ್ದಕ್ಕೆ ಕೆಲ ಕಾಲ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು ಎನ್ನಲಾಗಿದೆ. ಅಲ್ಲದೇ ಉಭಯ ಸೇನೆ ಹೆಚ್ಚುವರಿ ಸೈನಿಕರನ್ನು ಸ್ಥಳಕ್ಕೆ ಕರೆಸಿಕೊಂಡ ಪರಿಣಾಮ ಪರಿಸ್ಥಿತಿ ಮತ್ತಷ್ಟು ವಿಕೋಪಕ್ಕೆ ಹೋಗಿತ್ತು ಎಂದು ಸೇನೆ ತಿಳಿಸಿದೆ.

ಆದರೆ ಸಂಜೆ ವೇಳೆ ಭಾರತ ಮತ್ತು ಚೀನಾ ಸೇನೆಯ ಅಧಿಕಾರಿಗಳು ಸಭೆ ನಡೆಸಿ, ಸಮಸ್ಯೆಯನ್ನು ಶಾಂತಿಯುತವಾಗಿ ಬಗೆಹರಿಸಿದ್ದಾರೆಂದು ಸೇನೆ ಸ್ಪಷ್ಟಪಡಿಸಿದೆ. 

ಪ್ಯಾಂಗಾಂಗ್ ಸರೋವರದ ಬಳಿ ಈ ಹಿಂದೆ ಚೀನಾ ಅತಿಕ್ರಮ ಪ್ರವೇಶ ಮಾಡಲು ಯತ್ನಿಸಿತ್ತು. ಈ ವೇಳೆ ತಡೆಯಲು ಬಂಧ ಭಾರತೀಯ ಸೈನಿಕರ ಮೇಲೆ ಚೀನಿ ಸೈನಿಕರು ಕಲ್ಲು ತೂರಿದ್ದರು. ಭಾರತ-ಚೀನಾ ಸೈನಿಕರ ನಡುವಿನ ಸಂಘರ್ಷದ ವಿಡಿಯೋ ಭಾರೀ ವೈರಲ್ ಆಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನನಗೂ ಸಿಎಂ ಆಗುವ ಆಸೆ ಇದೆ, ಹೈಕಮಾಂಡ್ ನಿರ್ಧಾರ ಅಂತಿಮ: ದಿನೇಶ್‌ ಗುಂಡೂರಾವ್
Karnataka News Live: Aadi Lakshmi Purana Serial - ವಿರುದ್ಧ ದಿಕ್ಕಿನಲ್ಲಿ ಸಾಗುವ, ಒಬ್ಬರನ್ನೊಬ್ಬರು ಕಂಡರೆ ಆಗದವ್ರು ಮದುವೆಯಾಗುವ ಕಥೆ